ಉಡುಪಿ: ವಂದೇ ಭಾರತ್ ರೈಲನ್ನು ಕರಾವಳಿಗೆ ವಿಸ್ತರಣೆ ಸಹಿತ ಕೊಂಕಣ ರೈಲ್ವೇ ಹಳಿಗಳ ದ್ವಿಪಥ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮನವಿ ಸಲ್ಲಿಸಿದ್ದಾರೆ.
ಹೊಸದಿಲ್ಲಿಯ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರಕನ್ನಡದವರೆಗೆ ವಿಸ್ತರಿ ಸಬೇಕಾದ ಅಗತ್ಯವನ್ನು ವಿವರಿಸಿದರು. ಪ್ರತೀ ದಿನ ಉತ್ತರಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪು ತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ 👇
ಅದರೊಂದಿಗೆ, ಮಂಗಳೂರಿನಿಂದ ಮುಂಬಯಿ ವರೆಗಿನ ಕೊಂಕಣ ರೈಲ್ವೇಯ 734 ಕಿ.ಮೀ. ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೇ ಸಂಚಾರಕ್ಕೆ ಅವಕಾಶ ಮಾಡಿ ಕೊಡಲು ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕು ಎಂದವರು ಮನವಿಯಲ್ಲಿ ತಿಳಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…