ಉಡುಪಿ: ವಂದೇ ಭಾರತ್ ರೈಲನ್ನು ಕರಾವಳಿಗೆ ವಿಸ್ತರಣೆ ಸಹಿತ ಕೊಂಕಣ ರೈಲ್ವೇ ಹಳಿಗಳ ದ್ವಿಪಥ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮನವಿ ಸಲ್ಲಿಸಿದ್ದಾರೆ.
ಹೊಸದಿಲ್ಲಿಯ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರಕನ್ನಡದವರೆಗೆ ವಿಸ್ತರಿ ಸಬೇಕಾದ ಅಗತ್ಯವನ್ನು ವಿವರಿಸಿದರು. ಪ್ರತೀ ದಿನ ಉತ್ತರಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪು ತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ 👇
ಅದರೊಂದಿಗೆ, ಮಂಗಳೂರಿನಿಂದ ಮುಂಬಯಿ ವರೆಗಿನ ಕೊಂಕಣ ರೈಲ್ವೇಯ 734 ಕಿ.ಮೀ. ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೇ ಸಂಚಾರಕ್ಕೆ ಅವಕಾಶ ಮಾಡಿ ಕೊಡಲು ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕು ಎಂದವರು ಮನವಿಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…