ಉಡುಪಿ: ವಯಸ್ಸಾದ್ರೂ ಸಿಎಂ ಯಡಿಯೂರಪ್ಪ ಜವಾಬ್ದಾರಿ ನಿರ್ವಹಿಸುವಲ್ಲಿ ಸಮರ್ಥರಿದ್ದಾರೆ. ಆರೋಗ್ಯವಾಗಿ ಇದ್ದವರಿಗೆ ವಯಸ್ಸು ಲೆಕ್ಕಕ್ಕೆ ಬರುವುದಿಲ್ಲ ಎಂದು ಉಡುಪಿ ಬಿಜೆಪಿ ಶಾಸಕ, ಸರಕಾರದ ಭರವಸೆಗಳ ಸಮಿತಿ ಅಧ್ಯಕ್ಷ ರಘುಪತಿ ಭಟ್ ಸಿಎಂಗೆ ಬೆಂಬಲವಾಗಿ ನಿಂತಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಸಿಎಂ ಉತ್ತಮ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಶಾಸಕರ ಸಭೆ ನಡೆಸುತ್ತಾರೆ. ಜಿಲ್ಲಾ ಪ್ರವಾಸವನ್ನು ಮಾಡುತ್ತಿದ್ದಾರೆ. ಯಡಿಯೂರಪ್ಪ ಪರ- ವಿರೋಧ ಸಹಿಸಂಗ್ರಹ ಮಾಡಬಾರದು ಎಂಬ ಸೂಚನೆ ಬಂದಿದೆ. ನನ್ನ ಬಳಿ ಯಾರು ಸಹಿ ಕೇಳಿಲ್ಲ, ನಾನು ಸಹಿ ಹಾಕುವುದಿಲ್ಲ. ಪಕ್ಷದಲ್ಲಿ ಸಹಿಸಂಗ್ರಹ ಆಗಬಾರದು ಎಂದು ಹೈಕಮಾಂಡ್ ಸೂಚನೆ ಕೊಟ್ಟಿದೆ ಎಂದು ತಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.
ಶಾಸಕರನ್ನು ಕರೆದು ಅಭಿಪ್ರಾಯ ಕೇಳಲು ಅವಕಾಶ ಇದೆ, ಕೇಳಬಹುದು. ರಾಜ್ಯದಲ್ಲೇ ಯಾರೋ ಕೂತು ಸಹಿ ಸಂಗ್ರಹ ಮಾಡುವುದು ಸರಿಯಲ್ಲ. ಹೈಕಮಾಂಡ್ ಬೇಕಿದ್ದರೆ ಈ ಕೆಲಸ ಮಾಡಬಹುದು. ಸಿಎಂ ಬದಲಾಗುವ ಅನಿವಾರ್ಯತ ಇಲ್ಲ. ಸಿಎಂ ಬದಲಾವಣೆ ವಿಚಾರ ಎಲ್ಲಿಂದ ಸೃಷ್ಟಿಯಾಗಿದೆಯೋ ಗೊತ್ತಿಲ್ಲ. ಸಿಎಂ ಬದಲಾವಣೆ ಆಗಬೇಕಾದ ಅನಿವಾರ್ಯತೆ ನನಗೆ ಕಂಡುಬರುತ್ತಿಲ್ಲ. ಹೈಕಮಾಂಡ್ನ ವರಿಷ್ಠರ ಬಂದು ಶಾಸಕರ ಅಭಿಪ್ರಾಯ ಕೇಳಬಹುದು ಎಂದು ಹೇಳಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…