Featured

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ – vishwanews24

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ

ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ 11:30ರ ಸುಮಾರಿಗೆ ನಡೆದಿದೆ.

ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ವಿನಯ್ ದೇವಾಡಿಗ, ಮಂಗಳವಾರ ವೈಯಕ್ತಿಕ ಕೆಲಸದ ನಿಮಿತ್ತ ಉಡುಪಿಗೆ ಹೋಗಿ ಸಂಜೆ 6 ಗಂಟೆಗೆ ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು.

ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮನೆಯ ಎಲ್ಲಾ ಕಡೆಗಳಲ್ಲಿ ವಿನಯ್ ಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕೋಣೆಯಲ್ಲಿದ್ದ ವಿನಯ್ ಶಬ್ದದಿಂದ ಎಚ್ಚರಗೊಂಡಾಗ ಆರೋಪಿಗಳು ವಿನಯ್ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಪ್ರಯತ್ನಪಟ್ಟರು. ನಂತರ ಅಜಿತ್, ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡ. ಆಕ್ಷೇಂದ್ರ ಹಾಗೂ ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ಅವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರು ಎಂದು ದೂರಲಾಗಿದೆ.

ಆರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ವಿನಯ್ ದೇವಾಡಿಗ ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವುದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

7 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

8 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

8 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

9 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

10 hours ago