Featured

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ – vishwanews24

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ

ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ 11:30ರ ಸುಮಾರಿಗೆ ನಡೆದಿದೆ.

ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ವಿನಯ್ ದೇವಾಡಿಗ, ಮಂಗಳವಾರ ವೈಯಕ್ತಿಕ ಕೆಲಸದ ನಿಮಿತ್ತ ಉಡುಪಿಗೆ ಹೋಗಿ ಸಂಜೆ 6 ಗಂಟೆಗೆ ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು.

ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮನೆಯ ಎಲ್ಲಾ ಕಡೆಗಳಲ್ಲಿ ವಿನಯ್ ಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕೋಣೆಯಲ್ಲಿದ್ದ ವಿನಯ್ ಶಬ್ದದಿಂದ ಎಚ್ಚರಗೊಂಡಾಗ ಆರೋಪಿಗಳು ವಿನಯ್ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಪ್ರಯತ್ನಪಟ್ಟರು. ನಂತರ ಅಜಿತ್, ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡ. ಆಕ್ಷೇಂದ್ರ ಹಾಗೂ ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ಅವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರು ಎಂದು ದೂರಲಾಗಿದೆ.

ಆರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ವಿನಯ್ ದೇವಾಡಿಗ ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವುದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

9 minutes ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

23 minutes ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

21 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

23 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

23 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

24 hours ago