Featured

ಉಡುಪಿ : ವಾಣಿಜ್ಯ ಬಳಕೆ ಸಿಲಿಂಡರ್‌ ಅಭಾವ :  150ಕ್ಕೂ ಹೆಚ್ಚು ಹೊಟೇಲ್‌ ಬಂದ್‌ – vishwanews24

ಉಡುಪಿ : ವಾಣಿಜ್ಯ ಬಳಕೆ ಸಿಲಿಂಡರ್‌ ಅಭಾವ :  150ಕ್ಕೂ ಹೆಚ್ಚು ಹೊಟೇಲ್‌ ಬಂದ್‌

ಉಡುಪಿ : ವಾಣಿಜ್ಯ ಬಳಕೆಯ ಸಿಲಿಂಡರ್‌ ಅಭಾವದಿಂದಾಗಿ ಉಡುಪಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್‌ಗ‌ಳು ಬಂದ್‌ ಆಗಿವೆ ಎಂದು ಜಿಲ್ಲಾ ಹೊಟೇಲ್‌ ಮಾಲಕರ ಸಂಘ ತಿಳಿಸಿದೆ.

ಕೆಲವು ದಿನಗಳಿಂದ ಹೊಟೇಲ್‌ಗ‌ಳಲ್ಲಿ ಕುಚ್ಚಲಕ್ಕಿ ಅನ್ನ, ದೋಸೆ ಸಹಿತ ಇತರ ತಿನಸುಗಳನ್ನು ಕೈಬಿಟ್ಟು ಹೊಟೇಲ್‌ ನಿರ್ವಹಣೆ ಮಾಡಲಾಗುತ್ತಿತ್ತು. ಆದರೆ ಈಗ 150ಕ್ಕೂ ಹೆಚ್ಚು ಹೊಟೇಲ್‌ಗ‌ಳಿಗೆ ಬೀಗ ಹಾಕಲಾಗಿದೆ. ಗ್ಯಾಸ್‌ ಪೂರೈಕೆ ಅಭಾವದಿಂದ ಅನಿವಾರ್ಯವಾಗಿ ಹೊಟೇಲ್‌ ಬಂದ್‌ ಮಾಡಲಾಗಿದೆ ಎಂಬ ಫಲಕವನ್ನೂ ಅಳವಡಿಸಲಾಗಿದೆ. ಬೇಡಿಕೆಗೆ ತಕ್ಕಂತೆ ಸಿಲಿಂಡರ್‌ ಪೂರೈಕೆಯಾದರಷ್ಟೇ ಹೊಟೇಲ್‌ ತೆರೆಯಬಹುದು ಎಂದು ಹೊಟೇಲ್‌ ಮಾಲಕರೊಬ್ಬರು ತಿಳಿಸಿದ್ದಾರೆ. ಕೆಲವು ಹೊಟೇಲ್‌ಗ‌ಳಲ್ಲಿ ಕಟ್ಟಿಗೆ ಬಳಸಿಕೊಂಡು ಅಡುಗೆ ಮಾಡಲಾಗುತ್ತದೆಯಾದರೂ ಈಗ ಕಾರ್ಮಿಕರ ಕೊರತೆಯಿಂದಾಗಿ ಅದಕ್ಕೂ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ :

ಸೌದೆ ಬೇಕು ಎನ್ನುವಷ್ಟು ಲಭ್ಯತೆಯೂ ಇಲ್ಲ. ನಗರ ಪ್ರದೇಶದಲ್ಲಿ ಸೌದೆ ಮಾರಾಟ ಮಾಡುವವರ ಸಂಖ್ಯೆ ತೀರ ಕಡಿಮೆಯಿದೆ. ಸೌದೆ ದುಬಾರಿ ಜತೆಗೆ ಕೊರತೆಯೂ ಇದೆ ಎನ್ನಲಾಗಿದೆ. 2 ವಾರದ ಹಿಂದೆ ದಿನಕ್ಕೆ 2ರಿಂದ 3 ಸಾವಿರ ರೂ. ಮೌಲ್ಯದ ಕಟ್ಟಿಗೆಗಳು ಮಾರಾಟವಾಗುತ್ತಿದ್ದವು. ಮುಖ್ಯವಾಗಿ ಹಾಲ್‌ಗ‌ಳು, ಮನೆಮಂದಿಯಷ್ಟೇ ಕೊಂಡುಹೋಗುತ್ತಿದ್ದರು. ಆದರೆ ಈಗ ಹೊಟೇಲ್‌ ಮಾಲಕರಿಂದಲೇ ಅಪಾರ ಪ್ರಮಾಣದ ಬೇಡಿಕೆ ವ್ಯಕ್ತವಾಗುತ್ತಿದೆ. ದಿನಕ್ಕೆ 10 ಸಾವಿರ ರೂ.ಗೂ ಅಧಿಕ ಮೌಲ್ಯದ ಕಟ್ಟಿಗೆಗಳು ಮಾರಾಟವಾಗುತ್ತಿವೆ. ಅದರಲ್ಲೂ ಈಗಾಗಲೇ ಮುಂಗಡವಾಗಿ ಟನ್‌ಗಟ್ಟಲೆ ಕಟ್ಟಿಗೆ ಬುಕಿಂಗ್‌ ಮಾಡಿದವರು ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ :

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago