Red closed stamp. Horizontal composition.
ಉಡುಪಿ : ವಾಣಿಜ್ಯ ಬಳಕೆಯ ಸಿಲಿಂಡರ್ ಅಭಾವದಿಂದಾಗಿ ಉಡುಪಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್ಗಳು ಬಂದ್ ಆಗಿವೆ ಎಂದು ಜಿಲ್ಲಾ ಹೊಟೇಲ್ ಮಾಲಕರ ಸಂಘ ತಿಳಿಸಿದೆ.
ಕೆಲವು ದಿನಗಳಿಂದ ಹೊಟೇಲ್ಗಳಲ್ಲಿ ಕುಚ್ಚಲಕ್ಕಿ ಅನ್ನ, ದೋಸೆ ಸಹಿತ ಇತರ ತಿನಸುಗಳನ್ನು ಕೈಬಿಟ್ಟು ಹೊಟೇಲ್ ನಿರ್ವಹಣೆ ಮಾಡಲಾಗುತ್ತಿತ್ತು. ಆದರೆ ಈಗ 150ಕ್ಕೂ ಹೆಚ್ಚು ಹೊಟೇಲ್ಗಳಿಗೆ ಬೀಗ ಹಾಕಲಾಗಿದೆ. ಗ್ಯಾಸ್ ಪೂರೈಕೆ ಅಭಾವದಿಂದ ಅನಿವಾರ್ಯವಾಗಿ ಹೊಟೇಲ್ ಬಂದ್ ಮಾಡಲಾಗಿದೆ ಎಂಬ ಫಲಕವನ್ನೂ ಅಳವಡಿಸಲಾಗಿದೆ. ಬೇಡಿಕೆಗೆ ತಕ್ಕಂತೆ ಸಿಲಿಂಡರ್ ಪೂರೈಕೆಯಾದರಷ್ಟೇ ಹೊಟೇಲ್ ತೆರೆಯಬಹುದು ಎಂದು ಹೊಟೇಲ್ ಮಾಲಕರೊಬ್ಬರು ತಿಳಿಸಿದ್ದಾರೆ. ಕೆಲವು ಹೊಟೇಲ್ಗಳಲ್ಲಿ ಕಟ್ಟಿಗೆ ಬಳಸಿಕೊಂಡು ಅಡುಗೆ ಮಾಡಲಾಗುತ್ತದೆಯಾದರೂ ಈಗ ಕಾರ್ಮಿಕರ ಕೊರತೆಯಿಂದಾಗಿ ಅದಕ್ಕೂ ಸಮಸ್ಯೆ ಎದುರಾಗಿದೆ.
ಇದನ್ನೂ ಓದಿ :
ಸೌದೆ ಬೇಕು ಎನ್ನುವಷ್ಟು ಲಭ್ಯತೆಯೂ ಇಲ್ಲ. ನಗರ ಪ್ರದೇಶದಲ್ಲಿ ಸೌದೆ ಮಾರಾಟ ಮಾಡುವವರ ಸಂಖ್ಯೆ ತೀರ ಕಡಿಮೆಯಿದೆ. ಸೌದೆ ದುಬಾರಿ ಜತೆಗೆ ಕೊರತೆಯೂ ಇದೆ ಎನ್ನಲಾಗಿದೆ. 2 ವಾರದ ಹಿಂದೆ ದಿನಕ್ಕೆ 2ರಿಂದ 3 ಸಾವಿರ ರೂ. ಮೌಲ್ಯದ ಕಟ್ಟಿಗೆಗಳು ಮಾರಾಟವಾಗುತ್ತಿದ್ದವು. ಮುಖ್ಯವಾಗಿ ಹಾಲ್ಗಳು, ಮನೆಮಂದಿಯಷ್ಟೇ ಕೊಂಡುಹೋಗುತ್ತಿದ್ದರು. ಆದರೆ ಈಗ ಹೊಟೇಲ್ ಮಾಲಕರಿಂದಲೇ ಅಪಾರ ಪ್ರಮಾಣದ ಬೇಡಿಕೆ ವ್ಯಕ್ತವಾಗುತ್ತಿದೆ. ದಿನಕ್ಕೆ 10 ಸಾವಿರ ರೂ.ಗೂ ಅಧಿಕ ಮೌಲ್ಯದ ಕಟ್ಟಿಗೆಗಳು ಮಾರಾಟವಾಗುತ್ತಿವೆ. ಅದರಲ್ಲೂ ಈಗಾಗಲೇ ಮುಂಗಡವಾಗಿ ಟನ್ಗಟ್ಟಲೆ ಕಟ್ಟಿಗೆ ಬುಕಿಂಗ್ ಮಾಡಿದವರು ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ :
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…