Featured

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ – vishwanews24

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ ಮತ್ತು ಮೊಬೈಲ್ ಮಳಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಲ್ಲದೆ, ಪಕ್ಕದ ಎರಡು-ಮೂರು ಅಂಗಡಿಗಳಿಗೂ ಹಾನಿಯಾಗಿದ್ದು, ಭಾರಿ ನಷ್ಟ ಸಂಭವಿಸಿದೆ.

ಇದನ್ನೂ ಓದಿ: 

ಭಾನುವಾರ ಸಂಜೆ ಆರಂಭವಾದ ಅಗ್ನಿಶಾಮಕ ದಳದ ಕಾರ್ಯಾಚರಣೆಯು ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಮುಂದುವರೆದಿದೆ. ತಡರಾತ್ರಿ ಬೆಂಕಿಯನ್ನು ಹತೋಟಿಗೆ ತಂದಿದ್ದರೂ, ಗೋದಾಮು ಮತ್ತು ಕೆಳಗಿನ ಅಂಗಡಿಗಳಲ್ಲಿ ಬೆಂಕಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿತ್ತು. ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಈ ದುರಂತದಲ್ಲಿ ಒಂದೇ ಮಾಲೀಕರಿಗೆ ಸೇರಿದ ನಾಲ್ಕು ಮಳಿಗೆಗಳು ಸಂಪೂರ್ಣ ಭಸ್ಮವಾಗಿವೆ. ಈ ಆಘಾತದಿಂದಾಗಿ ಅಂಗಡಿ ಮಾಲೀಕ ಭೀಮಾ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: 

ಕೇವಲ ಸರಕು ಸಾಮಗ್ರಿಗಳು ಮಾತ್ರವಲ್ಲದೆ, ಬೆಂಕಿಯ ತೀವ್ರತೆಗೆ ಕಟ್ಟಡ ಮತ್ತು ಅದರ ಶಟರ್‌ಗಳಿಗೂ ತೀವ್ರ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

2 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

3 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

3 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

3 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

3 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

4 hours ago