Featured

ಉಡುಪಿ: ವಾಣಿಜ್ಯ ಸಿಲಿಂಡರ್ ಸಮಸ್ಯೆ ಎರಡು ದಿನಗಳೊಳಗೆ ಪರಿಹರಿಸಲು ಪ್ರಯತ್ನ : ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ವಾಣಿಜ್ಯ ಸಿಲಿಂಡರ್ ಸಮಸ್ಯೆ ಎರಡು ದಿನಗಳೊಳಗೆ ಪರಿಹರಿಸಲು ಪ್ರಯತ್ನ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೊಲ್ಲಿ ರಾಷ್ಟ್ರದಲ್ಲಿ ಯುದ್ಧಭೀತಿಯಿಂದ ಉಂಟಾಗಿರುವ ಅನಿಲ ವ್ಯತ್ಯಯದಿಂದಾಗಿ ಹೊಟೇಲ್ ಮಾಲಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಎರಡು ದಿನಗಳೊಳಗೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಉಡುಪಿ ಜಿಲ್ಲಾ ಹೋಟೇಲ್ ಮಾಲಕರ ಸಂಘದ ವತಿಯಿಂದ ನಗರದ ಡಯಾನ ಹೋಟೇಲ್‌ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಾಣಿಜ್ಯ ಬಳಕೆಯ ಅನಿಲ ಅಲಭ್ಯತೆಯ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ, ಆಹಾರ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿದ್ದು, ಒಂದು ವಾರದೊಳಗೆ ಸಮಸ್ಯೆ ಪರಿಹಾರವಾಗಲಿದೆ ಎಂದಿದ್ದಾರೆ. ಕೊಲ್ಲಿ ರಾರ್ಷ್ಟಗಳ ಯುದ್ಧದಿಂದಾಗಿ ಇಡೀ ಜಗತ್ತಿನಾದ್ಯಂತ ಉಂಟಾಗಿರುವ ತಾತ್ಕಾಲಿಕ ಸಮಸ್ಯೆಯಿದು. ಹಾಗಾಗಿ ಲಭ್ಯವಿರುವ ಅನಿಲವನು ಹೇಗೆ ವಿತರಿಸಬೇಕು. ಎನ್ನುವ ಬಗ್ಗೆ ಚಿಂತಿಸಬೇಕು. ಇದನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳದೇ ಸಮಸ್ಯೆ ಬಗೆಹರಿಸಿಕೊಳ್ಳುವ ಕಡೆ ಗಮನಹರಿಸುವ ಅಗತ್ಯತೆ ಇದೆ. ಒಂದು ವಾರದಲ್ಲಿ ಈ ಸಮಸ್ಯೆ ಪರಿಹಾರವಾಗಲಿದ್ದು, ಅಲ್ಲಿವರೆಗೆ ಲಭ್ಯವಿರುವ ಸಿಲಿಂಡರ್‌ಗಳ ವಿತರಣೆಗೆ ವಿಧಿಸಿರುವ ನಿಯಮವನ್ನು ಸಡಿಲಗೊಳಿಸಿ, ಹೊಟೇಲ್ ಮಾಲಕರಿಗೂ ಅನಿಲ ವಿತರಿಸಲು ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಅವರು ಭರವಸೆ ನೀಡಿದರು.

ಇದನ್ನೂ ಓದಿ:

ಸಭೆಯಲ್ಲಿ ಭಾಗವಹಿಸಿದ ಉಡುಪಿ ಪುತ್ರುನ್ ಗ್ಯಾಸ್ ಮಾಲಕ ದಿನೇಶ್ ಪುತ್ರನ್ ಮಾತನಾಡಿ, ಸೋಮವಾರದಿಂದ (ಮಾರ್ಚ್ 9) ಡಿಸ್ಮಿಂಬೂಟರ್‌ಗಳಿಗೆ ಗ್ಯಾಸ್ ಪೂರೈಕೆಯಾಗಿಲ್ಲ. ಲಭ್ಯವಿದ್ದ ಅನಿಲ ವಿತರಣೆಗೂ ನಿಯಮಗಳನ್ನು ತಂದಿದ್ದು, ಬಿಸಿಯೂಟದ ಶಾಲೆಗಳು, ಆಸ್ಪತ್ರೆಯ ಕ್ಯಾಂಟೀನ್ ಹಾಗೂ ಇಂದಿರಾ ಕ್ಯಾಂಟೀನ್‌ಗಳಿಗೆ ವಿತರಿಸಲು ತಿಳಿಸಿದ್ದಾರೆ. ಅಲ್ಲದೇ ಗೃಹ ಬಳಕೆ ಅನಿಲ ಬುಕ್ಕಿಂಗ್‌ಗೂ ಕೆಲವೊಂದು ನಿಯಮಗಳನ್ನು ತಂದಿದ್ದು, ಹೀಗಾಗಿ ಗೃಹಬಳಕೆಯ ಗ್ಯಾಸ್ ಗೂ ಪ್ಯಾನಿಕ್ ಬುಕ್ಕಿಂಗ್ ಪ್ರಾರಂಭವಾಗಿತ್ತು. ಗೃಹ ಬಳಕೆಯ ಗ್ಯಾಸ್ ವಿತರಣೆಯಲ್ಲಿ ಯಾವುದೇ ತೊಂದರೆಯಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ ಎಂದರು. ಸಭೆಯಲ್ಲಿ ಹೊಟೇಲ್ ಮಾಲಕ ಶಿವಪುಸಾದ್ ಶೆಟ್ಟಿ, ತಲ್ಲೂರು, ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ನಾಗೇಶ್ ಭಟ್, ಲಕ್ಷಂಣ್ ಮೊದಲಾದವರು ಇದ್ದರು.

ಇದನ್ನೂ ಓದಿ:

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

21 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

22 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago