ಉಡುಪಿ : ವಾದಗಳು ಆರ್ಭಟಗಳು ಸಮಸ್ಯೆಯನ್ನು ಪರಿಹಾರ ಮಾಡುವುದಿಲ್ಲ ಎಂದು ಸಿದ್ಧರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿರುಗೇಟು ನೀಡಿದ್ದಾರೆ.
ಇಂದು ಆದಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ನವರು ಕಾಲಕಾಲಕ್ಕೆ ವಿರೋಧ ಪಕ್ಷದ ನಾಯಕರಾಗಿ ವಾಗ್ದಾಳಿ ನಡೆಸುವುದು ಸಾಮಾನ್ಯವಾಗಿದೆ. ಆದರೆ ವಾದಗಳು ಆರ್ಭಟಗಳು ಸಮಸ್ಯೆಯನ್ನು ಪರಿಹಾರ ಮಾಡುವುದಿಲ್ಲ, ವಾಸ್ತವಿಕ ವಿಚಾರಗಳ ನೆಲೆಗಳನ್ನು ಇಟ್ಟುಕೊಂಡು ಉತ್ತಮ, ಸಮರ್ಥ ಆಡಳಿತ ನೀಡುವುದರ ಮೂಲಕ ಸಮಸ್ಯೆ ಪರಿಹಾರ ಮಾಡಬಹುದು. ಸಮಸ್ಯೆಯನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಮುಖ್ಯ ಮಂತ್ರಿಯವರು ಅತ್ಯಂತ ಸಮರ್ಥ ಮುಖ್ಯ ಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಸಹಜವಾಗಿ ವಿರೋಧ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯನವರು ಆರ್ಭಟಿಸುತ್ತಿದ್ದಾರೆ. ಅವರೆಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ ಎಂದರು.
ಈ ವೇಳೆ ಮುಖ್ಯಮಂತ್ರಿಗಳಿಗೆ ಕಣ್ಣಿಲ್ಲ, ನಾಲಗೆ ಇಲ್ಲ ಎಂಬ ಸಿದ್ಧರಾಮಯ್ಯ ಅವರ ಟೀಕೆಗೆ ಸಿಎಂ ಅವರು ಯಾಕೆ ಮೌನವಾಗಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕಲವೊಂದು ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದೆನಿಸುವುದಿಲ್ಲ. ದೊಡ್ಡವರು ಆಡುವ ಸಣ್ಣ ಮಾತಿಗೆ ಉತ್ತರ ಇರುವುದಿಲ್ಲ. ಅದಕ್ಕಾಗಿ ಸಿದ್ದರಾಮಯ್ಯನವರು ನನ್ನ ದೃಷ್ಟಿಯಲ್ಲಿ ರಾಜಕಾರಣದಲ್ಲಿ ದೊಡ್ಡ ಮನುಷ್ಯ, ಮಾಜಿ ಮುಖ್ಯಮಂತ್ರಿಗಳಾಗಿದ್ದವರು. ಅವರು ಸಣ್ಣ ಮಾತುಗಳನ್ನು ಆಡಿದರೆ ಉತ್ತರ ಕೊಡಬೇಕು ಎಂದೆನಿಸುವುದಿಲ್ಲ . ಮುಖ್ಯಮಂತ್ರಿಯವರ ಮೌನವೇ ಅರ್ಥಗರ್ಬಿತ. ಕೆಲವು ಪ್ರಶ್ನೆಗಳಿಗೆ ನಿರುತ್ತರವೇ ಉತ್ತರ ಎಂದರು ಹಾಗೂ ಮುಖ್ಯ ಮಂತ್ರಿಯವರು ಸಮರ್ಥವಾದ ಆಡಳಿತ ನೀಡುತ್ತಿದ್ದಾರೆ. ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…