ಉಡುಪಿ: ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ಮುಖಂಡರು ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ವಾರಂಬಳ್ಳಿ ಗ್ರಾಮ ಪಂಚಾಯತ್ ನಲ್ಲಿ 2 ಬಾರಿ ಕಾಂಗ್ರೆಸ್ ನಿಂದ ಸದಸ್ಯರಾಗಿದ್ದು, ಅಧ್ಯಕ್ಷರಾಗಿದ್ದ ನಿತ್ಯಾನಂದ ಬಿ.ಆರ್., ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಎಸ್.ಸಿ. ಮೋರ್ಚಾ ಅಧ್ಯಕ್ಷರಾದ ಎಸ್. ನಾರಾಯಣ್, ವಾರಂಬಳ್ಳಿ ಪಂಚಾಯತ್ ನಲ್ಲಿ ಕಾಂಗ್ರೆಸ್ ನಿಂದ 5 ಬಾರಿ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರಾಗಿದ್ದ ನವೀನ್ ಚಂದ್ರ ನಾಯಕ್ ಸೇರಿದಂತೆ ವಾರಂಬಳ್ಳಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಸದಸ್ಯರುಗಳಾದ ರಾಜು ಸಾಲ್ಯಾನ್, ದೇವಾನಂದ, ಕ್ರಿಸ್ತೀನ್, ಗೋಪಾಲ ದೇವಾಡಿಗ, ಕವಿತಾ, ಹೇಮಾ ಶೆಟ್ಟಿಗಾರ್, ಸದಾನಂದ ಪೂಜಾರಿ, ಗುಲಾಬಿ ಕುಂದರ್ ಮತ್ತು ಸುರೇಶ್ ಬಿರ್ತಿ ಸೇರಿದಂತೆ ಒಟ್ಟು 12 ಮಂದಿ ಕಾಂಗ್ರೆಸ್ ಜನ ಪ್ರತಿನಿಧಿಗಳು ಉಡುಪಿ ಶಾಸಕ ಕೆ. ರಘುಪತಿ ಭಟ್ ರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಹೊಸದಾಗಿ ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ವಾರಂಬಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿಗಳಾದ ಸುಧೀರ್ ಶೆಟ್ಟಿ, ಪಕ್ಷದ ಮುಖಂಡರಾದ ನಿಶಾನ್ ರೈ, ಬಿರ್ತಿ ರಾಜೇಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಕುಸುಮ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ನಾಯ್ಕ್, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ನಾಗವೇಣಿ, ಬ್ರಹ್ಮಾವರ ಮಹಾಶಕ್ತಿ ಕೇಂದ್ರದ ಸದಸ್ಯರಾದ ಉಲ್ಲಾಸ್ ವಾರಂಬಳ್ಳಿ ಮತ್ತು ಹರೀಶ್ ಶೆಟ್ಟಿ ಚೇರ್ಕಾಡಿ ಹಾಗೂ ಪಕ್ಷದ ಹಿರಿಯರು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…
ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…