ಉಡುಪಿ: ಉಡುಪಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ, ಉದ್ಯಾವರ, ಕಟಪಾಡಿ, ಪಾಂಗಳ, ಕಾಪು, ಮೂಳೂರು, ಉಚ್ಚಿಲ, ಪಡುಬಿದ್ರಿ, ಹೆಜಮಾಡಿ ಮೂಲಕವಾಗಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಈ ಹೆದ್ದಾರಿ ಇದೀಗ ವಾಹನ ಸವಾರರಿಗೆ ಮರಣ ಕ0ಟಕವಾಗಿ ಪರಿಣಮಿಸಿದೆ.
ಈ ಸಂಪೂರ್ಣ ಹೆದ್ದಾರಿಯು ಹಲವಾರು ಅವ್ಯವಸ್ಥೆಗಳಿಂದ ಕೂಡಿದ್ದು ಹೊಂಡ ಗುಂಡಿಗಳು ಚಾಲಕರಿಗೆ ಚಾಲೆಂಜ್ ನೀಡುತ್ತಿವೆ. ಉಡುಪಿಯ ಕರಾವಳಿ ಬೈಪಾಸ್ ನಿಂದ ಪ್ರಾರಂಭಿಸಿ ಉದ್ಯಾವರದ ಬಲಾಯಿಪಾದೆ, ಕಿನ್ನಿಮುಲ್ಕಿ, ಕಟಪಾಡಿ ಜಂಕ್ಷನ್, ಈ ಮುಂತಾದ ಭಾಗಗಳಲ್ಲಿ ಬೃಹತ್ ಆದ ಹೊಂಡಗಳು ಬಿದ್ದಿದ್ದು ವೇಗವಾಗಿ ಬರುವ ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿವೆ.
ಹೆಜಮಾಡಿ, ಸಾಸ್ತಾನ, ಸುರತ್ಕಲ್ ಎಂಬಂತೆ ಮೂರು ಕಡೆ ಈ ರಸ್ತೆಗೆ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಒಪ್ಪಂದದ ಪ್ರಕಾರ ಟೋಲ್ ಸಂಗ್ರಹದಿಂದ ಬಂದ ಹಣದಲ್ಲಿ ರಸ್ತೆಯನ್ನು ನಿರ್ವಹಣೆ ಮಾಡಬೇಕಾಗಿರುವುದು ಕಂಟ್ರಾಕ್ಟರ್ ಕಂಪನಿಯ ಜವಾಬ್ದಾರಿ. 2010 ರಲ್ಲಿ ಈ ಹೆದ್ದಾರಿ ಕಾಮಗಾರಿಯ ಕುರಿತಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗ ಟೋಲ್ ಕಂಪನಿಯ ನಡುವೆ ನಡೆದ ಒಪ್ಪಂದದ ಪ್ರಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ ಕಂಡು ಬಂದ 48 ಗಂಟೆಗಳ ಒಳಗಾಗಿ ಅವುಗಳನ್ನು ರಿಪೇರಿ ಮಾಡುವುದು ಕಂಪನಿಯ ಜವಾಬ್ದಾರಿ. ಆದರೆ ಇದ್ಯಾವುದನ್ನೂ ಮಾಡದೇ ನವಯುಗ ಟೋಲ್ ಕಂಪನಿ ನಿರ್ಲ್ಯಕ್ಷ್ಯ ವಹಿಸುತ್ತಿರುವುದು ಇದೀಗ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ರಾಷ್ಟ್ರೀಯ ಹೆದ್ದಾರಿಯ ಸ್ಥಿತಿ ಈ ರೀತಿಯ ಆದರೆ ಉಡುಪಿ, ಕುಂದಾಪುರ, ಕಾರ್ಕಳ ಭಾಗದ ನಗರ ರಸ್ತೆಗಳ ಪರಿಸ್ಥಿತಿ ಕೂಡ ಇದರಿಂದ ಹೊರತಾಗಿಲ್ಲ. ಭಾರಿ ಪ್ರಮಾಣದ ಮಳೆಯಿಂದಾಗಿ ನಗರ ಭಾಗದ ರಸ್ತೆಗಳು, ಜಿಲ್ಲಾ ಪ್ರಮುಖ ರಸ್ತೆಗಳು, ಗ್ರಾಮೀಣ ರಸ್ತೆಗಳು ಹೊಂಡಗಳಿಂದ ತುಂಬಿ ಹೋಗಿದ್ದು, ಹಲವು ಕಡೆಗಳಲ್ಲಿ ವಾಹನದಲ್ಲಿ ಓಡಾಡಲು ಕೂಡ ಸಾಧ್ಯವಾಗದ ಪರಿಸ್ಥಿತಿ ಇದೆ. ಹೊಂಡಮಯ ರಸ್ತೆಯಿಂದಾಗಿ ನಿತ್ಯ ಸಂಚರಿಸುವರು ಯಾತನೆ ಅನುಭವಿಸುತ್ತಿದ್ದು ಕಾರು ಆಟೋ ಸೇರಿದಂತೆ ಸಣ್ಣ ವಾಹನಗಳು ಈ ರಸ್ತೆಗಳಲ್ಲಿ ಚಲಿಸುವುದು ಹರಸಾಹಸವಾಗಿದೆ.
ಕೆಲವೊಂದು ಕಡೆಗಳಲ್ಲಿ ಸುಮಾರು 2 ಅಡಿ ಆಳದಷ್ಟು ಗುಂಡಿಗಳಿದ್ದು ಮಳೆ ಬಂದ ಸಂದರ್ಭದಲ್ಲಿ ಇವುಗಳಲ್ಲಿ ನೀರು ನಿಂತು ವಾಹನ ಸವಾರರಿಗೆ ಮತ್ತುಷ್ಟು ಅಪಾಯಕ್ಕೆ ಆಹ್ವಾನವನ್ನು ನೀಡುತ್ತಿದೆ. ವಾರದ ಹಿಂದೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ 10 ದಿನಗಳ ಒಳಗೆ ಗುಂಡಿಗಳನ್ನು ಮುಚ್ಚಿ ರಸ್ತೆಯನ್ನು ಸರಿ ಮಾಡಲು ಆದೇಶಿಸಲಾಗಿತ್ತು. ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ನವಯುಗ ಕಂಪನಿ ಜನರ ಜೀವದ ಜೊತೆಗೆ ಚೆಲ್ಲಾಟ ವಾಡುತ್ತಿದೆ. ಕೆಲವೇ ದಿನಗಳ ಹಿಂದೆ ಉಡುಪಿಯ ಕರಾವಳಿ ಬೈಪಾಸ್ ಬಳಿ ವೇಗವಾಗಿ ಬರುತಿದ್ದ ಕಾರೊಂದು ಹೆದ್ದಾರಿಯಲ್ಲಿ ಇದ್ದ ನೀರಿನ ಸೆಳೆತಕ್ಕೆ ಸಿಲುಕಿ ಡಿವೈಡರ್ ದಾಟಿ ಸರ್ವಿಸ್ ರಸ್ತೆಯಲ್ಲಿ ಸಂಚರಿಸುತಿದ್ದ ಬೈಕ್ ಸವಾರರ ಮೇಲೆ ಬಿದ್ದಿತ್ತು. ಈ ಘಟನೆಯಲ್ಲಿ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಸವಾರನ ಕಾಲಿಗೆ ತೀವ್ರತರದ ಗಾಯಗಳಾಗಿದ್ದವು, ಡಿವೈಡರ್ ಬಳಿಯೇ ಮಳೆಯಿಂದಾಗಿ ನೀರು ಸಂಗ್ರಹವಾಗುತಿದ್ದು ಇದರಿಂದಾಗಿ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪುವ ಸಂಧರ್ಭ ಕೂಡಾ ಆಗ್ಗಾಗೆ ನಡೆಯುತ್ತಿರುತ್ತವೆ.
ಜಿಲ್ಲೆಗೆ ಮುಖ್ಯಮಂತ್ರಿಗಳು ಭೇಟಿ ನೀಡುತ್ತಾರೆ ಎಂದ ಕೂಡಲೇ ಎಚ್ಚರವಾಗುವ ಅಧಿಕಾರಿವರ್ಗ ಹೊಂಡ ಬಿದ್ದಲ್ಲಿ ತೇಪೆ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಾರೆ ಆದರೆ ಮಾರನೇ ಅಲ್ಲಿ ಮತ್ತೆ ಹೊಂಡ ತೆರೆದುಕೊಳ್ಳುತ್ತದೆ. ಮುಖ್ಯಮಂತ್ರಿಗಳು ಮಾತ್ರ ಉತ್ತಮ ರಸ್ತೆಯಲ್ಲಿ ಸಾಗಿ ನಿತ್ಯ ಪ್ರಯಾಣಿಕರು ಹೊಂಡದಲ್ಲಿ ಜೀವಹಾನಿ ಮಾಡಿಕೊಂಡರೂ ಪರವಾಗಿಲ್ಲ ಎನ್ನುವ ರೀತಿಯ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕ ಸಂಸದರ ಧೋರಣೆ ನಿಜಕ್ಕೂ ಖಂಡನೀಯ. ಜಿಲ್ಲೆಯಲ್ಲಿ ಎರಡು ಟೋಲ್ ಗಳಿಂದ ಪ್ರತಿನಿತ್ಯ ಲಕ್ಷಾಂತರ ಹಣ ವಸೂಲಿ ಮಾಡುವ ಸರಕಾರ ಜನರಿಗೆ ಉತ್ತಮ ರಸ್ತೆ ಏಕೆ ನೀಡುವುದಿಲ್ಲ? ರಸ್ತೆಯಲ್ಲಿನ ಹೊಂಡಗಳನ್ನು ಮುಚ್ಚದೆ ಹೋದರೆ ಟೋಲ್ ಸಂಗ್ರಹಿಸಲು ಬಿಡುವುದಿಲ್ಲ ಎಂದು ಬಾಯಿ ಮಾತಿನಲ್ಲಿ ಹೇಳುವ ಶಾಸಕರು ಅದನ್ನು ಕಾರ್ಯರೂಪದಲ್ಲಿ ತೋರಿಸುವ ಎದೆಗಾರಿಕೆ ಇರಬೇಕು ಎನ್ನುತ್ತಾರೆ ಪ್ರಯಾಣಿಕರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…