Categories: ಉಡುಪಿ

ಉಡುಪಿ: ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64.68 ಲಕ್ಷ ರೂ. ಮೌಲ್ಯದ ಉಚಿತ ಸಾಧನ ಸಲಕರಣೆ ವಿತರಣೆ – vishwanews24

ಉಡುಪಿ: ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64.68 ಲಕ್ಷ ರೂ. ಮೌಲ್ಯದ ಉಚಿತ ಸಾಧನ ಸಲಕರಣೆ ವಿತರಣೆ

ಉಡುಪಿ: ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ಉಚಿತ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 426 ವಿಕಲಚೇತನರಿಗೆ ಹಾಗೂ 273 ಹಿರಿಯ ನಾಗರಿಕರಿಗೆ ಒಟ್ಟು 64.68 ಲಕ್ಷ ರೂ. ಮೌಲ್ಯದ ಸಾಧನ ಸಲಕರಣೆಗಳನ್ನು ಇಂದು ವಿತರಿಸಲಾಯಿತು.

ಇದೊಂದು ಉತ್ತಮ ಕಾರ್ಯಕ್ರಮ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ನೀಡಲಾಗುವ ಅಗತ್ಯ ಸಲಕರಣೆಗಳ ಉತ್ಪಾದನ ಕೇಂದ್ರ ಹಾಗೂ ದುರಸ್ತಿ ಕೇಂದ್ರವನ್ನು ಉಡುಪಿ ಜಿಲ್ಲೆಯಲ್ಲಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಈ ವರ್ಷ ಉಡುಪಿ ಜಿಲ್ಲೆಯಲ್ಲಿ ಸರ್ವೆ ನಡೆಸಿ 426 ವಿಕಲಚೇತನರಿಗೆ 41.68 ಲಕ್ಷ ರೂ. ಮೌಲ್ಯದ ಹಾಗೂ 273 ಹಿರಿಯ ನಾಗರಿಕರಿಗೆ 23 ಲಕ್ಷ ರೂ. ಮೌಲ್ಯದ ಸಲಕರಣೆಗಳನ್ನು ಇಂದು ವಿತರಿಸಲಾಗುತ್ತಿದೆ. ಈ ಸಲಕರಣೆಗಳನ್ನು ದುರಸ್ತಿ ಪಡಿಸಲು ಮಂಗಳೂರಿನಲ್ಲಿ ದುರಸ್ತಿ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯಲ್ಲೂ ದುರಸ್ತಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು. ಈ ನಿಟ್ಟಿನಲ್ಲಿ ಸಂಸದರು ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನ ಮುಖ್ಯ ಅತಿಥಿಗಳಾಗಿ‌ ಭಾಗವಹಿಸಿದ್ದರು.

Vishwa News 24

Recent Posts

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

5 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago