ಉಡುಪಿ: 6 ನಕ್ಸಲರ ಶರಣಾಗತಿ ವಿಚಾರ ವಾಗಿ ಮಾತನಾಡಿ, ನನ್ನ ಸಹೋದರ ವಿಕ್ರಂ ಗೌಡನಿಗೂ ಇದೆ ರೀತಿ ಶರಣಾಗಲು ಅವಕಾಶ ನೀಡಬೇಕಿತ್ತು ಎಂದು ಸಹೋದರ ಸುರೇಶ್ ಗೌಡ ಹೇಳಿಕೆ ನೀಡಿದರು.
ಹೆಬ್ರಿಯಲ್ಲಿ ಎನ್ಕೌಂಟರ್ ಗೆ ಬಲಿಯಾದ ವಿಕ್ರಂ ಗೌಡ ಸಹೋದರ ಸುರೇಶ್ ಗೌಡ ಬೇಸರ ವ್ಯಕ್ತಪಡಿಸಿದರು. ಶರಣಾಗುವ ನಕ್ಸಲರಿಗೆ ನೀಡುವ ಪರಿಹಾರ ನೀಡಿ ಎಂದು ಮನವಿ ಮಾಡಿದರು. ನವೆಂಬರ್ 18 ರಂದು ANF ಗುಂಡೇಟಿಗೆ ವಿಕ್ರಂ ಗೌಡ ಬಲಿಯಾಗಿದ್ದು, ಇದೀಗ ವಿಕ್ರಂ ಗೌಡ ತಂಡಲ್ಲಿದ್ದ ನಕ್ಸಲರು ಶರಣಾಗತಿಯಾಗಿದ್ದಾರೆ.
ಶರಣಾಗತಿ ಬಗ್ಗೆ ಎನ್ಕೌಂಟರ್ ಗೆ ಬಲಿಯಾದ ನಕ್ಸಲ್ ವಿಕ್ರಂ ಗೌಡ ಸಹೋದರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ನಕ್ಸಲ್ ಶರಣಾಗತಿ ಒಳ್ಳೆ ವಿಚಾರ ಮುಂದೆ ಉತ್ತಮ ಜೀವನ ನಡೆಸಲಿ. ನನ್ನ ಅಣ್ಣನಿಗೆಯಾದ ಪರಿಸ್ಥಿತಿ ಮುಂದೆ ಯಾರಿಗೂ ಆಗಬಾರದು. ಅವರ ಕುಟುಂಬಸ್ಥರು ನೋವು ಅನುಭವಿಸಬಾರದು. ಈ ಯೋಜನೆ ಮೊದಲೇ ಘೋಷಣೆ ಮಾಡಿದ್ರೆ ನನ್ನ ಅಣ್ಣನೂ ಶರಣಾಗುತ್ತಿದ್ದ. ಒಳ್ಳೆಯ ಜೀವನ ನಮ್ಮೊಂದಿಗೆ ನಡೆಸುತ್ತಿದ್ದ. ಸ್ವಲ್ಪ ದಿನ ಜೈಲು ವಾಸ ಅನುಭವಿಸಿ ಮುಂದೆಯಾದರೂ ಒಳ್ಳೆಯ ಜೀವನ ನಡೆಸೋ ಅವಕಾಶ ಇತ್ತು ಎಂದರು.
ಶರಣಾಗುವ ನಕ್ಸಲರಿಗೆ ನೀಡುವ ಪರಿಹಾರ ವಸತಿ ನಮಗೂ ನೀಡಿ. ನಾವು ಬಹಳ ಕಷ್ಟದಲ್ಲಿದ್ದೇವೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ನಮ್ಮನ್ನು ಇಲ್ಲಿಯವರೆಗೆ ಯಾವುದೇ ಸಮಿತಿ ಭೇಟಿ ಮಾಡಿಲ್ಲ. ಅಧಿಕಾರಿಗಳ ಕಿರಯಕುಳದಿಂದ ಅಣ್ಣ ನಕ್ಸಲ್ ಹೋರಾಟಕ್ಕೆ ಇಳಿದಿದ್ದ. ಅಣ್ಣನಿಗೆ ಮಾನಸಿಕ ಕಿರುಕುಳ ಅಧಿಕಾರಿಗಳು ನೀಡಿದ್ದರು. ಎನ್ಕೌಂಟರ್ ಬಗ್ಗೆಯೂ ತನಿಖೆಯಾಗಲಿ, ನಮಗೂ ಪರಿಹಾರ ನೀಡಲಿ ಎಂದು ಸರ್ಕಾರಕ್ಕೆ ವಿಕ್ರಂ ಗೌಡ ಸಹೋದರ ಮನವಿ ಮಾಡಿಕೊಂಡರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…