ಉಡುಪಿ

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ – vishwanews24

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ

ಉಡುಪಿ: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಪುರಪ್ರವೇಶ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.

ಸಂಪ್ರದಾಯದಂತೆ ತೀರ್ಥ ಕ್ಷೇತ್ರಗಳ ದರ್ಶನ ಮುಗಿಸಿ ಉಡುಪಿಯ ಕಡಿಯಾಳಿಗೆ ತಲುಪಿದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಅವರನ್ನು ಮೆರವಣಿಗೆಯಲ್ಲಿ ಮಠಕ್ಕೆ ಕರೆದೊಯ್ಯಲಾಯಿತು.

ಶೀರೂರು ಮಠದ ಪಟ್ಟದೇವರಾದ ರುಕ್ಮಿಣಿ, ಸತ್ಯಭಾಮ ಸಹಿತ ವಿಠಲ ದೇವರನ್ನು ಮೇನೆಯಲ್ಲಿಟ್ಟು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.ವೇದವರ್ಧನ ಶ್ರೀಗಳು ಮಯೂರಾಲಂಕೃತ ತೆರೆದ ವಾಹನದಲ್ಲಿ ತೆರಳಿದರು.

ಸಾವಿರಾರು ಮಂದಿ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಲಾತಂಡಗಳು, ಕುಣಿತ ಭಜನೆ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ನಂತರ ಸ್ವಾಮೀಜಿ ವಿಶೇಷ ಅಲಂಕೃತ ವಾಹನದಲ್ಲಿ ಪುರಪ್ರವೇಶ ಮಾಡಿದರು. ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ಅವರು, ಶ್ರೀಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ ಹಾಗೂ ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠದಿಂದ ಶಿರೂರು ಸ್ವಾಮೀಜಿಯನ್ನು ಗೌರವಿಸಲಾಯಿತು. ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ತದನಂತರ ರಥಬೀದಿಯಲ್ಲಿ ಹಾಕಲಾದ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಶಿರೂರು ಸ್ವಾಮೀಜಿ ಅವರನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಪೌರ ಸಮ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್‌ ಸುವರ್ಣ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯ, ಕಾರ್ಯದರ್ಶಿ ಮೋಹನ್ ಭಟ್, ಕೋಶಾಧಿಕಾರಿ ಜಯ ಪ್ರಕಾಶ್ ಕೆದ್ಲಾಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

15 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

15 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

16 hours ago