ಉಡುಪಿ

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ – vishwanews24

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ

ಉಡುಪಿ: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಪುರಪ್ರವೇಶ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.

ಸಂಪ್ರದಾಯದಂತೆ ತೀರ್ಥ ಕ್ಷೇತ್ರಗಳ ದರ್ಶನ ಮುಗಿಸಿ ಉಡುಪಿಯ ಕಡಿಯಾಳಿಗೆ ತಲುಪಿದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಅವರನ್ನು ಮೆರವಣಿಗೆಯಲ್ಲಿ ಮಠಕ್ಕೆ ಕರೆದೊಯ್ಯಲಾಯಿತು.

ಶೀರೂರು ಮಠದ ಪಟ್ಟದೇವರಾದ ರುಕ್ಮಿಣಿ, ಸತ್ಯಭಾಮ ಸಹಿತ ವಿಠಲ ದೇವರನ್ನು ಮೇನೆಯಲ್ಲಿಟ್ಟು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.ವೇದವರ್ಧನ ಶ್ರೀಗಳು ಮಯೂರಾಲಂಕೃತ ತೆರೆದ ವಾಹನದಲ್ಲಿ ತೆರಳಿದರು.

ಸಾವಿರಾರು ಮಂದಿ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಲಾತಂಡಗಳು, ಕುಣಿತ ಭಜನೆ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ನಂತರ ಸ್ವಾಮೀಜಿ ವಿಶೇಷ ಅಲಂಕೃತ ವಾಹನದಲ್ಲಿ ಪುರಪ್ರವೇಶ ಮಾಡಿದರು. ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ಅವರು, ಶ್ರೀಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ ಹಾಗೂ ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠದಿಂದ ಶಿರೂರು ಸ್ವಾಮೀಜಿಯನ್ನು ಗೌರವಿಸಲಾಯಿತು. ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ತದನಂತರ ರಥಬೀದಿಯಲ್ಲಿ ಹಾಕಲಾದ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಶಿರೂರು ಸ್ವಾಮೀಜಿ ಅವರನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಪೌರ ಸಮ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್‌ ಸುವರ್ಣ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯ, ಕಾರ್ಯದರ್ಶಿ ಮೋಹನ್ ಭಟ್, ಕೋಶಾಧಿಕಾರಿ ಜಯ ಪ್ರಕಾಶ್ ಕೆದ್ಲಾಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

19 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

19 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago