ಉಡುಪಿ

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ – vishwanews24

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ

ಉಡುಪಿ: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಪುರಪ್ರವೇಶ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.

ಸಂಪ್ರದಾಯದಂತೆ ತೀರ್ಥ ಕ್ಷೇತ್ರಗಳ ದರ್ಶನ ಮುಗಿಸಿ ಉಡುಪಿಯ ಕಡಿಯಾಳಿಗೆ ತಲುಪಿದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಅವರನ್ನು ಮೆರವಣಿಗೆಯಲ್ಲಿ ಮಠಕ್ಕೆ ಕರೆದೊಯ್ಯಲಾಯಿತು.

ಶೀರೂರು ಮಠದ ಪಟ್ಟದೇವರಾದ ರುಕ್ಮಿಣಿ, ಸತ್ಯಭಾಮ ಸಹಿತ ವಿಠಲ ದೇವರನ್ನು ಮೇನೆಯಲ್ಲಿಟ್ಟು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.ವೇದವರ್ಧನ ಶ್ರೀಗಳು ಮಯೂರಾಲಂಕೃತ ತೆರೆದ ವಾಹನದಲ್ಲಿ ತೆರಳಿದರು.

ಸಾವಿರಾರು ಮಂದಿ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಲಾತಂಡಗಳು, ಕುಣಿತ ಭಜನೆ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ನಂತರ ಸ್ವಾಮೀಜಿ ವಿಶೇಷ ಅಲಂಕೃತ ವಾಹನದಲ್ಲಿ ಪುರಪ್ರವೇಶ ಮಾಡಿದರು. ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ಅವರು, ಶ್ರೀಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ ಹಾಗೂ ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠದಿಂದ ಶಿರೂರು ಸ್ವಾಮೀಜಿಯನ್ನು ಗೌರವಿಸಲಾಯಿತು. ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ತದನಂತರ ರಥಬೀದಿಯಲ್ಲಿ ಹಾಕಲಾದ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಶಿರೂರು ಸ್ವಾಮೀಜಿ ಅವರನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಪೌರ ಸಮ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್‌ ಸುವರ್ಣ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯ, ಕಾರ್ಯದರ್ಶಿ ಮೋಹನ್ ಭಟ್, ಕೋಶಾಧಿಕಾರಿ ಜಯ ಪ್ರಕಾಶ್ ಕೆದ್ಲಾಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago