Featured

‘ಉಡುಪಿ ವಿಡಿಯೋ ಪ್ರಕರಣ – ತನಿಖೆ ವರದಿ ಬಂದ ನಂತರ ಕ್ರಮ : ಸಿದ್ದರಾಮಯ್ಯ – Vishwanews24

ಮಂಗಳೂರು: ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿದ್ದರಾಮಯ್ಯ

ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್‌‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.

ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago