Featured

‘ಉಡುಪಿ ವಿಡಿಯೋ ಪ್ರಕರಣ – ತನಿಖೆ ವರದಿ ಬಂದ ನಂತರ ಕ್ರಮ : ಸಿದ್ದರಾಮಯ್ಯ – Vishwanews24

ಮಂಗಳೂರು: ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿದ್ದರಾಮಯ್ಯ

ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್‌‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.

ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

52 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago