ಉಡುಪಿ: ನಗರದ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ ಇಂದು ಪ್ರತಿಭಟನೆ ನಡೆಸಿದೆ.
ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ ಮೊಬೈಲ್ಗಳಿದ್ದರೆ ಅವುಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುವುದು. ಅಲ್ಲದೇ ಡಿಲೀಟ್ ಮಾಡಿದ್ದರೆ ಅವುಗಳನ್ನು ಎಫ್ಎಸ್ಎಲ್ಗೆ ಕಳುಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ವಿದ್ಯಾರ್ಥಿ ಮುಖಂಡರು ಎಫ್ಐಆರ್ ದಾಖಲಾಗಲು ಇಷ್ಟು ವಿಳಂಬ ಏಕೆ? ಎಫ್ಐಆರ್ ದಾಖಲಾಗದೆ ಹೇಗೆ ಮೊಬೈಲ್ ಪರಿಶೀಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆರೋಪಿಗಳನ್ನು ಬಚಾವ್ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…