ಉಡುಪಿ: ನಗರದ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ ಇಂದು ಪ್ರತಿಭಟನೆ ನಡೆಸಿದೆ.
ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ ಮೊಬೈಲ್ಗಳಿದ್ದರೆ ಅವುಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುವುದು. ಅಲ್ಲದೇ ಡಿಲೀಟ್ ಮಾಡಿದ್ದರೆ ಅವುಗಳನ್ನು ಎಫ್ಎಸ್ಎಲ್ಗೆ ಕಳುಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ವಿದ್ಯಾರ್ಥಿ ಮುಖಂಡರು ಎಫ್ಐಆರ್ ದಾಖಲಾಗಲು ಇಷ್ಟು ವಿಳಂಬ ಏಕೆ? ಎಫ್ಐಆರ್ ದಾಖಲಾಗದೆ ಹೇಗೆ ಮೊಬೈಲ್ ಪರಿಶೀಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆರೋಪಿಗಳನ್ನು ಬಚಾವ್ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…