ಉಡುಪಿ: ನಗರದ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ ಇಂದು ಪ್ರತಿಭಟನೆ ನಡೆಸಿದೆ.
ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ ಮೊಬೈಲ್ಗಳಿದ್ದರೆ ಅವುಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುವುದು. ಅಲ್ಲದೇ ಡಿಲೀಟ್ ಮಾಡಿದ್ದರೆ ಅವುಗಳನ್ನು ಎಫ್ಎಸ್ಎಲ್ಗೆ ಕಳುಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ವಿದ್ಯಾರ್ಥಿ ಮುಖಂಡರು ಎಫ್ಐಆರ್ ದಾಖಲಾಗಲು ಇಷ್ಟು ವಿಳಂಬ ಏಕೆ? ಎಫ್ಐಆರ್ ದಾಖಲಾಗದೆ ಹೇಗೆ ಮೊಬೈಲ್ ಪರಿಶೀಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆರೋಪಿಗಳನ್ನು ಬಚಾವ್ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…