ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಯುವತಿ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಿಸಿಎ ಪದವೀಧರೆಯಾಗಿರುವ ಶಾಲಿನಿ ವಂಚನೆಗೊಳಗಾದ ಯುವತಿ. ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಕೋಲಾರ ಜಿಲ್ಲೆಯ ಮಾಲೂರು ನಿವಾಸಿ ನಿತೀನ್ ಕುಮಾರ್ ವಂಚಿಸಿದ ಯುವಕನಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದುಬೈ ಹಾಗೂ ಅಮೆರಿಕದ ಪ್ರಮುಖ ಕಂಪೆನಿಯಲ್ಲಿ ಒಳ್ಳೆಯ ಕೆಲಸ ಕೊಡಿಸುವುದಾಗಿ ನಂಬಿಸಿ ಶಾಲಿನಿಯವರ ಹೆಸರಿನಲ್ಲಿರುವ ಕುಂದಾಪುರ ಯೂನಿಯನ್ ಬ್ಯಾಂಕ್ ಖಾತೆಯಿಂದ 22,63,999ರೂ., ಕೋರಮಂಗಳ ಶಾಖೆಯ ಎಚ್ಡಿಎಫ್ಸಿ ಬ್ಯಾಂಕ್ನಿಂದ 5,85,000, ಶಾಲಿನಿ ಅವರ ತಂದೆ ಕೆ.ನರಸಿಂಹ ಪೂಜಾರಿ ಅವರ ಕುಂದಾಪುರದ ಎಸ್ಬಿಐ ಖಾತೆಯಿಂದ 5,16,302 ರೂ. ಸೇರಿದಂತೆ ಒಟ್ಟು 33,65,501 ರೂ.ನಗದು ಹಣವನ್ನು ತನ್ನ ಕೋರಮಂಗಲ ಶಾಖೆಯ ಎಚ್ಡಿಎಫ್ಸಿ ಬ್ಯಾಂಕ್ ಖಾತೆಗೆ ಮೊಬೈಲ್ನ ವಿವಿಧ ಆ್ಯಪ್ ಮೂಲಕ ವರ್ಗಾಯಿಸಿಕೊಂಡಿದ್ದು, ಪಿರ್ಯಾದಿದಾರರಿಗೆ ಕೆಲಸವನ್ನು ಕೊಡಿಸದೇ, ಹಣವನ್ನು ಹಿಂದಿರುಗಿಸದೇ ಆರೋಪಿ ನಿತೀಶ್ ಕುಮಾರ್ ನಂಬಿಕೆ ದ್ರೋಹ, ವಂಚನೆ ಹಾಗೂ ಮೋಸವನ್ನು ಎಸಗಿರುವುಗಾಗಿ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…