ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ ಮುಕ್ತಾರ್ ಇಸ್ಲಾಯಿಲ್ ಕೋಟೇಶ್ವರ ಪ್ರಕರಣದ ಆರೋಪಿ.
ಈತ ತೆಂಕನಿಡಿಯೂರಿನ ಸತೀಶ, ಅಜಿತ್ ಹಾಗೂ ಮಣಿಪಾಲದ ಸಂಗಪ್ಪ ಎಂಬ ಮೂವರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು
ವಂಚಿಸಿದ್ದಾನೆ ಎಂದು ಮೂವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24
ದೂರಿನ ಪ್ರಕಾರ ಮುಕ್ತಾರ್ ಒಂದು ವರ್ಷದ ಹಿಂದೆ ಸತೀಶ್, ಅಜಿತ್, ಸಂಗಪ್ಪ ಎಂಬ ಮೂವರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ,
ಮೂವರಿಂದಲೂ ತಲಾ 65,000 ರೂ ನಗದುಪಡೆದುಕೊಂಡಿದ್ದಾನೆ. ಆದರೆ ಈವರೆಗೂ ಉದ್ಯೋಗವು ಕೊಡಿಸದೆ, ಇತ್ತ ಹಣವನ್ನೂ ಹಿಂದಿರುಗಿಸದೆ
ವಂಚಿಸಿದ್ದಾನೆ. ಅಲ್ಲದೆ ಮುಕ್ತಾರ್ ತನ್ನ ಮೊಬೈಲ್ ಫೋನ್ ಕೂಡಾ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ.
ಈ ಕುರಿತಂತೆ ಈ ಮೂವರು ಮುಕ್ತಾರ ಮನೆಗೆ ಹೋದ ವೇಳೆ ಮನೆಯವರೇ ಈತನ ಬಗ್ಗೆ ಬೈದಿದ್ದು, ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿ ನಾವು
ನಿಮಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ತಮ್ಮ ಹಣವನ್ನು ಹಿಂದಿರುಗಿಸಲು ಸಹಕಾರ ನೀಡುವಂತೆ
ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…