ಉಡುಪಿ : ವಿದೇಶದಿಂದ ಬಂದವರ ಕೋವಿಡ್ ಆರ್-ಟಿ-ಪಿಆರ್ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ.
ನ.20 ರ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ , ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕದ ಹಿನ್ನಲೆಯಲ್ಲಿ ವಿದೇಶದಿಂದ ಬಂದವರು ಮೇಲೆ ನಿಗಾ ವಹಿಸಲಾಗಿದೆ. ಆರ್-ಟಿ-ಪಿಆರ್ ನೆಗೆಟಿವ್ ವರದಿ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು. ಇದರೊಂದಿಗೆ ಕೇರಳದಿಂದ ಬಂದವರಿಗೂ ನೆಗೆಟಿವ್ ರಿಪೋರ್ಟ್ ಕಡ್ದಾಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಮುಗಿಸಿ ಮತ್ತೆ ಟೆಸ್ಟಿಂಗ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ಲಾ ಸಮುದಾಯದ ಮುಖಂಡರು, ಸಂಘ ಸಂಘಟನೆಗಳ ಸಭೆ ಮಾಡಿದ್ದೇವೆ.ಮಾರ್ಗಸೂಚಿ ಪಾಲನೆ ಹಾಗೂ ವ್ಯಾಕ್ಸಿನೇಶನ್ ಬಗ್ಗೆ ಸಹಕಾರ ಕೇಳಿದ್ದೇವೆ. ಮೊದಲ ಡೋಸ್ ಪಡೆಯದವರ ಪತ್ತೆ ಕಾರ್ಯ ನಡೆಯುತ್ತಿದೆ. ಲಸಿಕೆ ಪಡೆಯಲು ನಿರಾಸಕ್ತಿ ತೋರುವವರನ್ನು ಸಂಬಂಧಪಟ್ಟ ಸಮುದಾಯಗಳ ಮುಖಂಡರು ಮನವೊಲಿಸಬೇಕಾಗಿದೆ ಎಂದು ಹೇಳಿದ್ದಾರೆ.
ಇನ್ನು ಕಾಲೇಜು- ಹಾಸ್ಟೆಲ್ ಗಳ ಮೇಲೆ ಹೆಚ್ವಿನ ನಿಗಾ ವಹಿಸಲಾಗಿದೆ. ಮಣಿಪಾಲ ವಿವಿ ಜೊತೆ ಮಾತುಕತೆ ಮಾಡಿದ್ದೇವೆ. ಈ ಯೂನಿವರ್ಸಿಟಿ ಗೆ ಹೊರ ರಾಜ್ಯ ಹೊರ ದೇಶದಿಂದ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೀಗಾಗಿವಿದ್ಯಾರ್ಥಿಗಳಿಗೆ ಸಂಪೂರ್ಣ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯ ಮಾಡಲಾಗಿದೆ.ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಣಿಪಾಲ ವಿವಿ ಮುಖ್ಯಸ್ಥರು ಹೇಳಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]