Featured

ಉಡುಪಿ  : ವಿದೇಶಿ ಕರೆನ್ಸಿ ವಿನಿಮಯ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ – 6 ಮಂದಿ ಅಂತರರಾಜ್ಯ ಖದೀಮರು ಅರೆಸ್ಟ್ – Vishwanews24

ಉಡುಪಿ  : ವಿದೇಶಿ ಕರೆನ್ಸಿ ವಿನಿಮಯ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ – 6 ಮಂದಿ ಅಂತರರಾಜ್ಯ ಖದೀಮರು ಅರೆಸ್ಟ್

ಉಡುಪಿ : ವಿದೇಶಿ ಕರೆನ್ಸಿ ವಿನಿಮಯದ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ ಮಾಡಿದ ಅಂತರರಾಜ್ಯ ಖದೀಮರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲದ, ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದೆಹಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್ ಮತ್ತು ದೆಹಲಿ ಮೂಲದ ಮೊಹಮ್ಮದ್ ಜಹಾಂಗೀರಾ (60) ಎಂದು ಗುರುತಿಸಲಾಗಿದೆ.

ಆರೋಪಿಗಳು ಕರೆನ್ಸಿ ವಿನಿಮಯದಲ್ಲಿ ಕಡಿಮೆ ಬೆಲೆಗೆ ಯುಎಇ ದಿರ್ಹಾಮ್ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಗಳ ವಿರುದ್ಧ ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣೆಗಳಲ್ಲಿ ವಂಚನೆಗೆ ಒಳಗಾದವರು ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಭೇದಿಸಲು ಉಡುಪಿ ಎಸ್ಪಿ ಅಕ್ಷಯ ಎಂ.ಹೆಚ್ ವಿಶೇಷ ತಂಡ ರಚಿಸಿದ್ದರು.

ಆರೋಪಿಗಳು ಕಡಿಮೆ ದರದಲ್ಲಿ ಭಾರತೀಯ ಕರೆನ್ಸಿಗೆ ಬದಲಾಗಿ ಯುಎಇ ದಿರ್ಹಾಮ್‌ಗಳನ್ನು ನೀಡುವ ಮೂಲಕ ಸಂತ್ರಸ್ತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ನಂತರ, ಸಂತ್ರಸ್ತರಿಗೆ ತಮ್ಮ ಬಳಿ ಹೆಚ್ಚು ವಿದೇಶಿ ಕರೆನ್ಸಿ ಇದೆ ಎಂದು ಮನದಟ್ಟು ಮಾಡುತ್ತಿದ್ದರು. ನಂತರ, ಆರೋಪಿಗಳು ಹಣ ಬದಲಾಯಿಸಿಕೊಳ್ಳಲು, ಸ್ಥಳ ನಿಗದಿ ಮಾಡುತ್ತಿದ್ದರು. ಹಣ ಬದಲಾಯಿಸಿಕೊಳ್ಳಲು ಸ್ಥಳಕ್ಕೆ ಬಂದ ಸಂತ್ರಸ್ತರಿಗೆ ದಿರಾಹಮ್‌ಗಳ ಬದಲಿಗೆ ಬಟ್ಟೆಯಲ್ಲಿ ಸುತ್ತಿದ ಸಾಬೂನಿನ ಪ್ಯಾಕೆಟ್​​ನ್ನು ನೀಡುತ್ತಿದ್ದರು. ಸಂತ್ರಸ್ತರು ಆರೋಪಿ ನೀಡಿದ ವಿದೇಶಿ ಕರೆನ್ಸಿ ನೋಟುಗಳಿರುವ ಬ್ಯಾಗ್​​ನ್ನು ಪರಿಶೀಲಿಸುವ ಮೊದಲೇ ಆರೋಪಿಗಳು ಹಣವನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗುತ್ತಿದ್ದರು ಎಂದು ಎಸ್​ಪಿ ಎಸ್ಪಿ ಅಕ್ಷಯ ಎಂ.ಹೆಚ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ದೆಹಲಿ ಮತ್ತು ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇದೇ ರೀತಿಯ ಅಪರಾಧ ಎಸಗಿದ್ದಾರೆ ಎಂದು ಎಸ್ಪಿ ಅಕ್ಷಯ್ ಹೇಳಿದ್ದಾರೆ. ಆರೋಪಿಗಳನ್ನು ಮಾರ್ಚ್ 31 ರಂದು ಬಂಧಿಸಲಾಯಿತು ಮತ್ತು ಅವರನ್ನು ಕಸ್ಟಡಿಗೆ ಪಡೆದ ನಂತರ ಪೊಲೀಸರು 100 ದಿರ್ಹಮ್ ಮೌಲ್ಯದ 32 ವಿದೇಶಿ ಕರೆನ್ಸಿ ನೋಟುಗಳು, 19 ಮೊಬೈಲ್ ಫೋನ್‌ಗಳು, 6.29 ಲಕ್ಷ ರೂ. ಹಣ, ಮೂರು ಮೋಟಾರ್‌ಸೈಕಲ್‌ಗಳು ಮತ್ತು 30 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

12 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

12 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

12 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago