ಉಡುಪಿ

ಉಡುಪಿ : ವಿದ್ಯಾರ್ಥಿಗಳೇ ಜನವರಿ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ : ಯಶ್ಪಾಲ್ ಸುವರ್ಣ – vishwanews24

ಉಡುಪಿ : ವಿದ್ಯಾರ್ಥಿಗಳೇ ಜನವರಿ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ : ಯಶ್ಪಾಲ್ ಸುವರ್ಣ

ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜೊತೆ ನಿಂತು ನ್ಯಾಯ ಒದಗಿಸಲು ನಾನು ಸಿದ್ದ..

ಉಡುಪಿ: ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ಮಹೋತ್ಸವದ ಐತಿಹಾಸಿಕ ದಿನದಂದು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಸರ್ಕಾರಿ ನೌಕರರು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ನಿರಂತರವಾಗಿ ತನ್ನ ಹಿಂದೂ ವಿರೋಧಿ ಧೋರಣೆಯ ಮೂಲಕ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದು, ಇದರ ಮುಂದುವರಿದ ಭಾಗವಾಗಿ ಕೋಟ್ಯಾಂತರ ಹಿಂದೂಗಳ ಹಲವು ಶತಮಾನದ ಅಯೋಧ್ಯೆಯ ಶ್ರೀ ರಾಮ ಮಂದಿರದ ಕನಸು ಸಾಕಾರಗೊಳ್ಳುವ ಈ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ.

ಈಗಾಗಲೇ ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ಮಹಾರಾಷ್ಟ್ರ ಸಹಿತ ಹಲವಾರು ರಾಜ್ಯಗಳು ರಜೆ ಘೋಷಣೆ ಮಾಡಿದ್ದು, ಕೇಂದ್ರ ಸರ್ಕಾರ ಅರ್ಧ ದಿನದ ರಜೆಯನ್ನು ಅಂಗೀಕರಿಸಿದ್ದು ಕರ್ನಾಟಕ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ದಿವ್ಯ ಮೌನ ತಾಳಿದೆ.

ರಾಜ್ಯದ ಸಮಸ್ತ ರಾಮ ಭಕ್ತರು ತಮ್ಮ ಜೀವನದಲ್ಲಿ ದೊರೆತ ಈ ಪುಣ್ಯ ಪಾವನ ಕ್ಷಣವನ್ನು ಕಣ್ತುಂಬಿಕೊಳ್ಳಲು ಸ್ವಯಂ ರಜೆ ಪಡೆದು ಸಂಭ್ರಮದಲ್ಲಿ ಭಾಗಿಯಾಗಿ ಶ್ರೀ ರಾಮ ದೇವರ ಕೃಪೆಗೆ ಪಾತ್ರ ರಾಗುವ ಅವಕಾಶ ಒದಗಿ ಬಂದಿದೆ.

ಸ್ವಯಂ ರಜೆ ಪಡೆದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಹಾಗೂ ನೌಕರರಿಗೆ ಸರ್ಕಾರಿ ಇಲಾಖೆಗಳು ವ್ಯತಿರಿಕ್ತವಾಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾದರೆ ಶಾಸಕನಾಗಿ ವಿದ್ಯಾರ್ಥಿಗಳ ಜೊತೆ ನಿಂತು ನ್ಯಾಯ ಒದಗಿಸಲು ಬದ್ಧ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago