Featured

ಉಡುಪಿ :ವಿದ್ಯಾರ್ಥಿಗಳ ಹಿಜಾಬ್ ಧಾರಣೆ ಅಶಿಸ್ತು ಎಂಬ ಶಿಕ್ಷಣ ಸಚಿವರ ಹೇಳಿಕೆ ಖಂಡನಾರ್ಹ :  ಜಿಲ್ಲಾ ಮುಸ್ಲಿಮ್ ಒಕ್ಕೂಟ – Vishwanews24

ಉಡುಪಿ :ವಿದ್ಯಾರ್ಥಿಗಳ ಹಿಜಾಬ್ ಧಾರಣೆ ಅಶಿಸ್ತು ಎಂಬ ಶಿಕ್ಷಣ ಸಚಿವರ ಹೇಳಿಕೆ ಖಂಡನಾರ್ಹ :  ಜಿಲ್ಲಾ ಮುಸ್ಲಿಮ್ ಒಕ್ಕೂಟ – Vishwanews24

ಉಡುಪಿ: ‌ಹಿಜಾಬ್ ಧರಿಸುವುದು ಅಶಿಸ್ತು, ಶಾಲೆ ಧರ್ಮವನ್ನು ಆಚರಿಸುವ ಸ್ಥಳವಲ್ಲ ಎಂಬ ಶಿಕ್ಷಣ ಸಚಿವ ನಾಗೇಶ್’ರವರ ಹೇಳಿಕೆ ಖಂಡನಾರ್ಹ ಎಂದು ಮುಸ್ಲಿಮ್ ಒಕ್ಕೂಟ ಹೇಳಿದೆ.

ಸಚಿವರ ಈ ಹೇಳಿಕೆ ಅಲ್ಪಸಂಖ್ಯಾತರ ಹಕ್ಕುಗಳನ್ನು ನಿರಾಕರಿಸುತದೆ. ಭಾರತ ವಿವಿಧ ಧರ್ಮ, ಭಾಷೆ, ಸಂಸೃತಿ, ಆಚರಣೆಗಳ ವೈವಿಧ್ಯಮಯ ದೇಶ. ಈ ವೈವಿಧ್ಯತೆಗಳ ಸಹಕರಣ ಮತ್ತು ದೇಶದ ಪ್ರಜೆಗಳಾದ ಸಹಜೀವಿಗಳ ಪರಸ್ಪರ ಧರ್ಮ, ಆಚರಣೆ, ನಂಬಿಕೆ, ಸಂಸೃತಿ, ಭಾಷೆಗಳೊಂದಿಗೆ ಸಹಿಷ್ಣುತೆಯಿಂದ ಮುನ್ನಡೆಯುವಿಕೆ ಈ ದೇಶದ ಶಕ್ತಿ. ಇಲ್ಲದಿದ್ದಲ್ಲಿ ಸಚಿವರು ಯಾವ ವಿಧ್ಯಾರ್ಥಿಗಳ ಹಿಜಾಬ್ ಧರಿಸುವಿಕೆ ಅಶಿಸ್ತು ಎನ್ನುತ್ತಿದ್ದಾರೊ ಅದೇ ವಿಧ್ಯಾರ್ಥಿಗಳಿಗೆ ಅವರದೇ ಪಠ್ಯಗಳಲ್ಲಿ “ಭಾರತ ವಿವಿಧತೆಯಲ್ಲಿ ಏಕತೆಯ ದೇಶ” ಕಲಿಸುತ್ತಿರುವುದರ ಅರ್ಥವೇನು ? ದೇಶದ ಪ್ರತಿಯೊಂದು ಹಳ್ಳಿ ಪಟ್ಟಣಗಳಲ್ಲಿ ದೇಶದ ಪ್ರಜೆಗಳು ಧರ್ಮ, ನಂಬಿಕೆ,ಸಂಸ್ಕೃತಿ, ಭಾಷೆ, ಆಚರಣೆ ಇತ್ಯಾದಿಗಳನ್ನು ವೈವಿಧ್ಯಮಯವಾಗಿ ರೂಢಿಸಿಕೊಂಡು ಬರುತ್ತಿರುವಾಗ ಶಾಲೆಗಳಲ್ಲಿ ವಿಧ್ಯಾರ್ಥಿಗಳು “ಸಮವಸ್ತ್ರದ ಪಾಲನೆಯೊಂದಿಗೆ” ತಮ್ಮ ಧಾರ್ಮಿಕ ಬೇಡಿಕೆಯನ್ನು ಪೂರೈಸಿದರೆ ಸಮಸ್ಯೆಯಾಗುವುದು ಹೇಗೆ ? ಎಂದು ಮುಸ್ಲಿಮ್ ಒಕ್ಕೂಟ ಪ್ರಶ್ನಿಸಿದೆ.

ಹಿಜಾಬ್ ರಾಜಕೀಯಗೊಳಿಸಲಾಗುತ್ತಿದೆ, ವಿಧ್ಯಾರ್ಥಿಗಳು ಈಗ ಏಕೆ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಹೇಳುತ್ತಿದ್ದಾರೆ ಎಂದು ಕೂಡಾ ಸಚಿವರು ಪ್ರಶ್ನಿಸಿದ್ದಾರೆ. ವಾಸ್ತವದಲ್ಲಿ ಸಚಿವರು ತಾವು ಪ್ರತಿನಿಧಿಸುತ್ತಿರುವ ರಾಜಕೀಯ ಕನ್ನಡಿಯಿಂದ ಸಮಸ್ಯೆಯನ್ನು ನೋಡುತ್ತಿದ್ದಾರೆ. ವಿಧ್ಯಾರ್ಥಿಗಳು ಸ್ಕಾರ್ಫ್ ಹಾಕುದನ್ನು ತಡೆಯುದರಿಂದ ಸಿಗುವ ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರದಿಂದ ಈಚೆಗೆ ಬಂದು ಒರ್ವ ಸರಕಾರದ ಪ್ರತಿನಿಧಿಯಾಗಿ ನಿರ್ಣಾಯ ಕೈಗೊಳ್ಳಬೇಕಾಗಿದೆ.

ಸರಕಾರ ಎಂಬುದು ಎಲ್ಲರ ಸರಕಾರ ಆ ಎಲ್ಲರಲ್ಲಿ ಸ್ಕಾರ್ಫ್ ಧರಿಸುವ ತಮ್ಮ ಹಕ್ಕಿನ ಬೇಡಿಕೆ ಇಡುತ್ತಿರುವ ವಿಧ್ಯಾರ್ಥಿಗಳು ಸೇರಿದ್ದಾರೆ. ಅವರ ಹಕ್ಕಿನ ರಕ್ಷಣೆಯೂ ಸರಕಾರದ ಹೊಣೆಗಾರಿಕೆ. ಯಾರೋ ರಾಜಕೀಯ ಮಾಡುತ್ತಿದ್ದಾರೆ ಎಂಬ ಗುಮಾನಿಯನ್ನು ಇಟ್ಟುಕೊಂಡು ಜನರ ಹಕ್ಕುಗಳನ್ನು ಕಸಿಯುವುದು ಸರಿಯೇ ? ಸಂವಿಧಾನ ನೀಡಿದ ಹಕ್ಕುಗಳನ್ನು ರಕ್ಷಿಸುವುದು ಸರಕಾರದ ಜವಾಬ್ದಾರಿಯೇ ಹೊರತು ಸಂವಿಧಾನಾತ್ಮಕವಾಗಿ ದೊರೆತ ಸ್ಥಾನದಲ್ಲಿ ಇದ್ದುಕೊಂಡು ಸಾಂವಿಧಾನಿಕ ಹಕ್ಕುಗಳ ಬಗ್ಗೆ ಈಗೇಕೆ ಕೇಳುತ್ತೀರಿ ಎಂದು ಪ್ರಶ್ನಿಸುದಲ್ಲ. ಯಾರೇ ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗಲೇ ತಮ್ಮ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಪ್ರಶ್ನಿಸುವುದು ಎಂದು ಒಕ್ಕೂಟವು ಹೇಳಿದೆ.

ಶಾಲೆಗಳು ಧರ್ಮ ಅಚರಣೆ ಸ್ಥಳವಲ್ಲ ಎಂದು ಅವರು ಹೇಳುದಾದರೆ ಅವರ ದೃಷ್ಟಿಯಲ್ಲಿ ಶಾಲೆಗಳು ಧರ್ಮ ನಿರಾಕರಣೆಯ ಸ್ಥಳಗಳೇ ಅದನ್ನು ಅವರು ಸ್ಪಷ್ಟಪಡಿಸಲಿ. ಧರ್ಮವನ್ನು ಅಥವಾ ಯಾವುದೇ ಭಿನ್ನ ವೈಚಾರಿಕತೆಯನ್ನು ಅವರಿಗೆ ಒಪ್ಪಿಗೆ ಆದಾಗ ಪಾಲಿಸುಲು ಆರಂಭಿಸುವುದು ಯಾ ಬಿಡುವುದು ಅವರವರ ಆಯ್ಕೆ. ಆಗೇಕೆ ಮಾಡಿಲ್ಲ ಈಗೇಕೆ ಮಾಡುತ್ತೀರಿ ಎಂದು ಯಾರದೇ ವೈಯಕ್ತಿಕ ಜೀವನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ನಮ್ಮ ಸಂವಿಧಾನ ನೀಡಿಲ್ಲ. ಸಾರ್ವಭೌಮ ಭಾರತ ದೇಶ ಎಂದರೆ ಈ ದೇಶದ ಸಾರ್ವಭೌಮ ಪ್ರಜೆಗಳು ಎಂದು ಘೋಷಿಸಿ ಕೊಂಡ ದೇಶವಿದು ಎಂದು ಒಕ್ಕೂಟ ನೆನಪಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

9 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

11 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

12 hours ago