ಉಡುಪಿ : ವಿದ್ಯಾರ್ಥಿಯೋರ್ವನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಉಡುಪಿಯ ಕೋಚಿಂಗ್ ಸೆಂಟರ್ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಈತ ಎರಡು ತಿಂಗಳ ಹಿಂದೆ ಖರೀದಿಸಿದ್ದ ಸೆಕೆಂಡ್ ಹ್ಯಾಂಡ್ ಬೈಕ್ ಬಗ್ಗೆ ಅದೇ ಕೊಚಿಂಗ್ ಸೆಂಟರ್ನ ಪರಿಚಯದ ವಿದ್ಯಾರ್ಥಿ ಸುಹಾಸ್ ಎಂಬಾತ ಕದ್ದಿರುವ ಬೈಕ್ ಎಂದು ನಿಂದಿಸಿದ್ದ. ಅಲ್ಲದೆ ಪ್ರತೀಕ್ ಅವರು ನಿನ್ನೆ ಮಧ್ಯಾಹ್ನದ ವೇಳೆ ಎಂಜಿಎಂ ಮೈದಾನಕ್ಕೆ ಹೋದಾಗ ಸ್ಥಳದಲ್ಲಿ ಇದ್ದ ಆರೋಪಿಗಳಾದ ಸುಹಾಸ್, ಮೋನೀಶ್, ತರುಣ್ ಹಾಗೂ ಇತರ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಹಾಗೂ ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಪ್ರತೀಕ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…