ಉಡುಪಿ : “ವಿಧಾನಸಭೆಯ ಸ್ಪೀಕರ್ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ”ಎಂದು ಬಿಜೆಪಿ ನಾಯಕ ಸಿಟಿ ರವಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ದ ಕಿಡಿಕಾರಿದ್ದಾರೆ.
ತೆಲಂಗಾಣ ಚುನಾವಣೆ ಪ್ರಚಾರದ ವೇಳೆ ತೆಲಂಗಾಣ ಚುನಾವಣೆ ವೇಳೆ ಸಚಿವ ಜಮೀರ್ “ಕಾಂಗ್ರೆಸ್ ಪಕ್ಷ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್ ಸ್ಥಾನವನ್ನು ಮುಸ್ಲಿಮರಿಗೆ ನೀಡಿ, ಬಿಜೆಪಿ ಶಾಸಕರು ಸಹ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತೆ ಮಾಡಿದೆ ಎಂದು ಹೇಳಿಕೆ ನೀಡಿದ್ದರು. ಇದು ವಿವಾದದ ಸ್ವರೂಪ ಪಡೆದಿತ್ತು.
ಇದಕ್ಕೆ ತಿರುಗೇಟು ಕೊಟ್ಟು ಉಡುಪಿಯಲ್ಲಿ ಮಾತನಾಡಿದ, ಸಿಟಿ ರವಿ “ಸ್ಪೀಕರ್ಗೆ ಸಿಗುವುದು ಜಾಮಿಯ ಮಸೀದಿಯ ಮುಲ್ಲಾನಿಗೆ ಸಿಗುವ ಗೌರವ ಅಲ್ಲ. ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ , ಸ್ಪೀಕರ್ ಯುಟಿ ಖಾದರ್ ಅವರಿಗೆ ಘನತೆ ಇದೆ ಅದನ್ನು ಹಾಳು ಮಾಡಬೇಡಿ ಎಂದು ಹೇಳಿಕೆ ನೀಡಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…