Featured

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ – vishwanews24

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ

ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ 392 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ನಿಧನಗತಿಯಲ್ಲಿ ಮತದಾನ ಆರಂಭಗೊಂಡಿದೆ. ಉಡುಪಿ ನಗರಸಭೆಯ ಮತಗಟ್ಟೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಬೆಳಗ್ಗೆ ಹಕ್ಕು ಚಲಾವಣೆ ಮಾಡಿದರು. ನಗರಸಭೆಯು ಅಧ್ಯಕ್ಷ ಪ್ರಭಾಕರ್ ಪೂಜಾರಿ, ಸ್ಥಾಯಿ ಸಮಿತಿಯ ಅಧ್ಯಕ್ಷ ಸುಂದರ ಕಲ್ಮಾಡಿ ಹಾಗೂ ನಗರಸಭೆಯ ಕೆಲವು ಸದಸ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಅದೇ ರೀತಿ ಕಾರ್ಕಳ ಪುರಸಭೆಯಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಮತದಾನ ಮಾಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾಪು ಪುರಸಭೆಗೆ ತೆರಳಿ ಮತ ಚಲಾಯಿಸಿದರು.

ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದಾತ್ ಎಸ್. (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ) ಚುನಾವಣಾ ಕಣದಲ್ಲಿದ್ದಾರೆ.

ಅ.24ರಂದು ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago