Featured

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ – vishwanews24

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ

ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ 392 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ನಿಧನಗತಿಯಲ್ಲಿ ಮತದಾನ ಆರಂಭಗೊಂಡಿದೆ. ಉಡುಪಿ ನಗರಸಭೆಯ ಮತಗಟ್ಟೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಬೆಳಗ್ಗೆ ಹಕ್ಕು ಚಲಾವಣೆ ಮಾಡಿದರು. ನಗರಸಭೆಯು ಅಧ್ಯಕ್ಷ ಪ್ರಭಾಕರ್ ಪೂಜಾರಿ, ಸ್ಥಾಯಿ ಸಮಿತಿಯ ಅಧ್ಯಕ್ಷ ಸುಂದರ ಕಲ್ಮಾಡಿ ಹಾಗೂ ನಗರಸಭೆಯ ಕೆಲವು ಸದಸ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಅದೇ ರೀತಿ ಕಾರ್ಕಳ ಪುರಸಭೆಯಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಮತದಾನ ಮಾಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾಪು ಪುರಸಭೆಗೆ ತೆರಳಿ ಮತ ಚಲಾಯಿಸಿದರು.

ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದಾತ್ ಎಸ್. (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ) ಚುನಾವಣಾ ಕಣದಲ್ಲಿದ್ದಾರೆ.

ಅ.24ರಂದು ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

7 minutes ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

20 minutes ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

32 minutes ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

2 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

2 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

2 hours ago