Featured

ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ಮಾಡಿದ್ದೇವೆ – ಹಣೆ ಬರಹದ ಮೇಲೆ ಎಲ್ಲ ನಿರ್ಧಾರ : ರಘುಪತಿ ಭಟ್ – Vishwnaews24

ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದರೆ, ಮುಂದಿನ ಅಭಿಪ್ರಾಯವನ್ನು ತಿಳಿಸುತ್ತೇನೆ : ರಘುಪತಿ ಭಟ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ‌ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ‌ನೀಡಿದ ಉಡುಪಿಯ ಹಾಲಿ ಶಾಸಕ ರಘುಪತಿ ಭಟ್, ಬ್ರಾಹ್ಮಣ ಎಂಬ ಕಾರಣಕ್ಕೆ ಪಕ್ಷ ಈವರೆಗೆ ನನಗೆ ಟಿಕೆಟ್ ಕೊಟ್ಟದಲ್ಲ. ನಾನು ಯಾವುದೇ ಜಾತಿಯ ಕ್ಯಾಂಡಿಡೇಟ್‌ ಅಲ್ಲ. ನಾನು ಒಳ್ಳೆಯ ಕಾರ್ಯಕರ್ತ, ಕೆಲಸಗಾರ ಎಂಬ ಕಾರಣಕ್ಕೆ ಪಕ್ಷ ಈ ಹಿಂದೆ ಸೀಟ್ ಕೊಟ್ಟಿದೆ. ಒಂದು ವೇಳೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದರೆ, ಮುಂದಿನ ಅಭಿಪ್ರಾಯವನ್ನು ತಿಳಿಸುತ್ತೇನೆ ಎಂದರು.

ಕುಂದಾಪುರದಲ್ಲಿ ಯಾವುದೇ ಮಾನದಂಡ ಬಂದರೂ ನನಗೆ ಎಫೆಕ್ಟ್ ಆಗಲ್ಲ‌. ನಾನು ಕುಂದಾಪುರ ಕ್ಷೇತ್ರದ ಟಿಕೆಟ್ ಅಪೇಕ್ಷಿತನಲ್ಲ. ಉಡುಪಿ ಕ್ಷೇತ್ರದ ಆಕಾಂಕ್ಷಿ. ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಅಲ್ಲಿಯ ಅಭ್ಯರ್ಥಿಯ ಬಗ್ಗೆ ಪಕ್ಷ ತೀರ್ಮಾನಿಸಲಿದೆ.

ಕುಂದಾಪುರದ ಚಿತ್ರಣಕ್ಕೂ ಉಡುಪಿಗೂ ತಾಳೆ ಹಾಕಲು ಆಗಲ್ಲ ಎಂದರು. ಉಡುಪಿಯಲ್ಲಿ ಬಿಜೆಪಿಗೆ ಗೆಲ್ಲುವ ಅವಕಾಶ ಇದೆ‌. ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ಮಾಡಿದ್ದೇವೆ. ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸದ ಮೇಲೆ ಪಕ್ಷಕ್ಕೆ ಕರೆತಂದಿದ್ದೇನೆ. ಕೆಲವೊಮ್ಮೆ ಹಣೆಬರಹದ ಮೇಲೆ ನಿರ್ಧಾರ ಆಗುತ್ತದೆ. 2013ರಲ್ಲಿ ನನಗೆ ಕೈ ತಪ್ಪುವುದಿಲ್ಲ ಎಂಬ ವಿಶ್ವಾಸವಿತ್ತು. ಆದರೆ ನನ್ನಿಂದ ಆದ ಅವಘಡದಿಂದ ಟಿಕೆಟ್ ಕೈತಪ್ಪಿತ್ತು‌. ಹಾಗಾಗಿ ಹಣೆ ಬರಹದ ಮೇಲೆ ಎಲ್ಲ ನಿರ್ಧಾರ ಆಗುತ್ತದೆ. ಅದಕ್ಕೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ ಎಂದು ಹೇಳಿದರು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

25 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

33 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

41 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

48 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago