Featured

ಉಡುಪಿ: ವಿನಾಶಕಾರಿ ಮೀನುಗಾರಿಕೆ ಪದ್ಧತಿ ನಿಷೇಧ : ರಾಜ್ಯ ಸರ್ಕಾರದಿಂದ ಆದೇಶ -Vishwanews24

ಉಡುಪಿ: ರಾಜ್ಯ ಸರ್ಕಾರವು ವಿನಾಶಕಾರಿ ಮೀನುಗಾರಿಕೆ ಪದ್ಧತಿಗಳನ್ನು ನಿಷೇಧಿಸಿ, ಆದೇಶ ಹೊರಡಿಸಿದೆ.

ಬುಲ್ ಟ್ರಾಲಿಂಗ್ ಮೀನುಗಾರಿಕೆ, ಬೆಳಕು ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಚೌರಿ, ಚಿಂದಿ ಬಲೆ, ಕೊಳೆಯುವ ವಸ್ತುಗಳು ಹಾಗೂ ಇನ್ನಿತರ ಸಮುದ್ರ ಮಾಲಿನ್ಯ ವಸ್ತುಗಳನ್ನು, ಪದಾರ್ಥಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಕಪ್ಪೆ ಬಂಡಾಸ್ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ.

ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಗರಿಷ್ಟ 350 ಅಶ್ವ ಶಕ್ತಿ ಇಂಜಿನ್ ಅಳವಡಿಸಲು ಅನುಮತಿಸಲಾಗಿದೆ. ಎಲ್ಲಾ ಮೀನುಗಾರಿಕಾ ದೋಣಿಗಳಿಗೆ ಕಡ್ಡಾಯವಾಗಿ ಏಕರೂಪದ ಬಣ್ಣಹಚ್ಚಲು ಸೂಚಿಸಲಾಗಿದೆ.

ಎಲ್ಲಾ ಟ್ರಾಲ್ ಮೀನುಗಾರಿಕೆ ದೋಣಿಗಳಿಗೆ ಕಡ್ಡಾಯವಾಗಿ 35 ಎಂ.ಎಂ ಅಳತೆಯ ಸ್ಕ್ವೇರ್ ಮೆಶ್ ಕಾಡ್ ಎಂಡ್ ಬಲೆಯನ್ನು ಉಪಯೋಗಿಸುವುದು ಕಡ್ಡಾಯವಾಗಿದೆ. ಎಲ್ಲಾ ಪರ್ಸೀನ್ ಮತ್ತು ಔಟ್ ಬೋರ್ಡ್ ಇಂಜಿನ್ ಅಳವಡಿಸಿದ ಮೀನುಗಾರಿಕೆ ದೋಣಿಗಳು ಕಡ್ಡಾಯವಾಗಿ 20 ಎಂಎಂ ಅಳತೆಗಿಂತ ಸಣ್ಣ ಕಣ್ಣಿನ ಬಲೆಗಳನ್ನು ಉಪಯೋಗಿಸಬಾರದು. ಕರಾವಳಿ ತೀರ ಪ್ರದೇಶದಲ್ಲಿ ಪಚ್ಚಿಲೆ (ಗ್ರೀನ್ ಮಸಲ್) ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಒಟ್ಟು 19 ಜಾತಿಯ ಮೀನುಗಳ ಹಿಡುವಳಿಯನ್ನು ಕನಿಷ್ಟ ಕಾನೂನಾತ್ಮಕ ಗಾತ್ರ ನಿಗದಿಪಡಿಸಿ ಸರ್ಕಾರ ಆದೇಶಗೊಳಿಸಿದೆ.

ಮೇಲ್ಕಂಡ ಎಲ್ಲಾ ನಿಷೇಧಿತ ಪದ್ಧತಿಗಳನ್ನು ಕಡ್ಡಾಯವಾಗಿ ನಡೆಸದಿರುವಂತೆ, ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago