ಉಡುಪಿ: ರಾಜ್ಯ ಸರ್ಕಾರವು ವಿನಾಶಕಾರಿ ಮೀನುಗಾರಿಕೆ ಪದ್ಧತಿಗಳನ್ನು ನಿಷೇಧಿಸಿ, ಆದೇಶ ಹೊರಡಿಸಿದೆ.
ಬುಲ್ ಟ್ರಾಲಿಂಗ್ ಮೀನುಗಾರಿಕೆ, ಬೆಳಕು ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಚೌರಿ, ಚಿಂದಿ ಬಲೆ, ಕೊಳೆಯುವ ವಸ್ತುಗಳು ಹಾಗೂ ಇನ್ನಿತರ ಸಮುದ್ರ ಮಾಲಿನ್ಯ ವಸ್ತುಗಳನ್ನು, ಪದಾರ್ಥಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಕಪ್ಪೆ ಬಂಡಾಸ್ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ.
ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಗರಿಷ್ಟ 350 ಅಶ್ವ ಶಕ್ತಿ ಇಂಜಿನ್ ಅಳವಡಿಸಲು ಅನುಮತಿಸಲಾಗಿದೆ. ಎಲ್ಲಾ ಮೀನುಗಾರಿಕಾ ದೋಣಿಗಳಿಗೆ ಕಡ್ಡಾಯವಾಗಿ ಏಕರೂಪದ ಬಣ್ಣಹಚ್ಚಲು ಸೂಚಿಸಲಾಗಿದೆ.
ಎಲ್ಲಾ ಟ್ರಾಲ್ ಮೀನುಗಾರಿಕೆ ದೋಣಿಗಳಿಗೆ ಕಡ್ಡಾಯವಾಗಿ 35 ಎಂ.ಎಂ ಅಳತೆಯ ಸ್ಕ್ವೇರ್ ಮೆಶ್ ಕಾಡ್ ಎಂಡ್ ಬಲೆಯನ್ನು ಉಪಯೋಗಿಸುವುದು ಕಡ್ಡಾಯವಾಗಿದೆ. ಎಲ್ಲಾ ಪರ್ಸೀನ್ ಮತ್ತು ಔಟ್ ಬೋರ್ಡ್ ಇಂಜಿನ್ ಅಳವಡಿಸಿದ ಮೀನುಗಾರಿಕೆ ದೋಣಿಗಳು ಕಡ್ಡಾಯವಾಗಿ 20 ಎಂಎಂ ಅಳತೆಗಿಂತ ಸಣ್ಣ ಕಣ್ಣಿನ ಬಲೆಗಳನ್ನು ಉಪಯೋಗಿಸಬಾರದು. ಕರಾವಳಿ ತೀರ ಪ್ರದೇಶದಲ್ಲಿ ಪಚ್ಚಿಲೆ (ಗ್ರೀನ್ ಮಸಲ್) ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಒಟ್ಟು 19 ಜಾತಿಯ ಮೀನುಗಳ ಹಿಡುವಳಿಯನ್ನು ಕನಿಷ್ಟ ಕಾನೂನಾತ್ಮಕ ಗಾತ್ರ ನಿಗದಿಪಡಿಸಿ ಸರ್ಕಾರ ಆದೇಶಗೊಳಿಸಿದೆ.
ಮೇಲ್ಕಂಡ ಎಲ್ಲಾ ನಿಷೇಧಿತ ಪದ್ಧತಿಗಳನ್ನು ಕಡ್ಡಾಯವಾಗಿ ನಡೆಸದಿರುವಂತೆ, ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…