ಉಡುಪಿ: ಮಠಕ್ಕೆ ಮುಸ್ಲಿಂ ದೊರೆ ಜಾಗ ನೀಡಿದ್ದ ಎಂಬ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಯನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮುತಾಲಿಕ್, ಸಾವಿರಾರು ವರ್ಷಗಳಿಂದ ಶ್ರೀಕೃಷ್ಣಮಠದಲ್ಲಿ ಪೂಜೆ ಪುನಸ್ಕಾರಗಳು ನಡೆದುಕೊಂಡು ಬರುತ್ತವೆ. ಆದರೆ
ವಿವಾದ ಎಬ್ಬಿಸಿ ಮುಸ್ಲಿಮ್ ಮತ ಸಂಪಾದಿಸಲು ಇಂತಹ ಅಸಹ್ಯ ಹೇಳಿಕೆ ನೀಡಲಾಗಿದೆ. ಇಂತಹ ಅಸಹ್ಯ ಕೃತ್ಯವನ್ನು ಮಾಡಿರುವ ಮಿಥುನ್ ರೈ ಅವರ
ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಮಠದ ಕುರಿತು ನೀವು ನೀಡಿದ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.
ಕೇವಲ ಮುಸ್ಲಿಂ ಮತಗಳಿಗಾಗಿ ನೀವು ಈ ಕೃತ್ಯ ಮಾಡಿದ್ದರೆ ಕೃಷ್ಣಭಕ್ತರು ಮತ್ತು ಹಿಂದೂಗಳು ನಿಮಗೆ ಮತ ಹಾಕುವುದಿಲ್ಲ. ಚುನಾವಣೆಯ ಸಂದರ್ಭದಲ್ಲಿ ಇದು ಯಾಕೆ ಬೇಕಿತ್ತು? ಇದರ ಅವಶ್ಯಕತೆ ಇರಲಿಲ್ಲ. ಇಂತಹ ಹೇಳಿಕೆಗಳ ಮೂಲಕವೇ ಇಂದು ನಿಮ್ಮ ಸ್ಥಿತಿ ದೇಶದಲ್ಲಿ ಹೇಗಿದೆ ಅಂತ ಅವಲೋಕನ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…