ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ
ಉಡುಪಿ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರ ಹಮ್ಮಿಕೊಂಡಿರುವ ‘ಜೈಲ್ ಭರೋ’, ರಸ್ತೆ ತಡೆ ಹಾಗೂ ಪ್ರತಿಭಟನೆಯ ಭಾಗವಾಗಿ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ನಗರದ ಪ್ರಧಾನ ಅಂಚೆ ಕಚೇರಿ ಎದುರು ಬೆಳಿಗ್ಗೆ 11 ಗಂಟೆಗೆ ಜೆಸಿಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಳಿಕ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24
ವಿಜಿ ರಾಮ್ ಜಿ’ ರದ್ದುಗೊಳಿಸಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಬಲವಂತದ ಭೂಸ್ವಾಧೀನಕ್ಕೆ ಕಡಿವಾಣ ಹಾಕಬೇಕು ಹಾಗೂ ಕನಿಷ್ಠ ಮೂಲವೇತನ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಸುರೇಶ್ ಕಲ್ಲಾಗಾರ, ಶಶಿಧರ್ ಗೊಲ್ಲ, ಕವಿರಾಜ್, ವಾಮನ ಪೂಜಾರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಟೈಮಿಂಗ್ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ – vishwanews24
