ಉಡುಪಿ: ಜಾಗತಿಕ ಬಂಟರ ಸಂಘದ ಅಡಿಯಲ್ಲಿ ಎರಡು ದಿನಗಳ ಕಾಲ ನಡೆಯುವ ವಿಶ್ವ ಬಂಟರ ಸಮ್ಮೇಳನ 2023 ರ ಮೆರವಣಿಗೆ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡಿನ ಮೈದಾನದವರೆಗೆ ಭವ್ಯವಾಗಿ ನಡೆಯಿತು.
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಬಾರ್ಕೂರು ಸಂಸ್ಥಾನದ ಸಂತೋಷ ಭಾರತಿ ಸ್ವಾಮೀಜಿ, ಕಟೀಲು ಲಕ್ಷ್ಮೀ ನಾರಾಯಣ ಅಸ್ರಣ್ಣ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಪುರುಷೋತ್ತಮ ಪಿ ಶೆಟ್ಟಿ , ಪಟ್ಲ ಸತೀಶ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.
ದೀಪ ಪ್ರಜ್ವಲನೆ ಮತ್ತು ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಉಳ್ಳಾಲ ಬಂಟರ ಸಂಘದವರು ತ್ರಿವರ್ಣದ ಉಡುಗೆ, ಗುರುಪುರ ಸಂಘದ ಸೈನಿಕರ ದಿರಿಸು, ಬೆಳ್ಮಣ್ ಸಂಘದ ಟೀಂ ಇಂಡಿಯಾ ಜೆರ್ಸಿ, ಶಿರ್ವ ತಂಡದ ಕೃಷಿ ಚಟುವಟಿಕೆ ಗಮನ ಸೆಳೆದವು.
ಕರಾವಳಿ ಮಾತ್ರವಲ್ಲದೆ ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಶಿವಮೊಗ್ಗ, ಮಡಿಕೇರಿ, ಹುಬ್ಬಳ್ಳಿ, ಮೈಸೂರು, ಬೆಂಗಳೂರು, ಗೋವಾ ಮತ್ತು ಮಂಬೈನ ಸಂಘಗಳು ಭಾಗವಹಿಸಿದ್ದವು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…