ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ತೆರವುಗೊಳಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಹಕ್ಕೊತ್ತಾಯ ಸಭೆ ನಡೆಯಿತು.
ಕುಂದಾಪುರದ ಹೋಟೆಲ್ ಶರೋನ್ನಲ್ಲಿ ನಡೆದ ವರ್ತಕರು, ನಾಗರಿಕರ ಹಕ್ಕೊತ್ತಾಯ ಸಭೆಯಲ್ಲಿ ಮುಖಂಡ ಬಿ.ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಸದ್ಯ 1.4% ಪಾಸಿಟಿವಿಟಿ ಪ್ರಮಾಣ ಇರುವಾಗ ವೀಕೆಂಡ್ ಕರ್ಪ್ಯೂ ಹೇರಿರುವುದು ಅವೈಜ್ಞಾನಿಕ ಕ್ರಮವಾಗಿದೆ.
ಉಡುಪಿ ಜಿಲ್ಲೆಯ ದೊಡ್ಡ ಸಂತೆಯಾಗಿರುವ ಕುಂದಾಪುರ ಸಂತೆ ಶನಿವಾರ ನಡೆಯುವುದರಿಂದ ವೀಕೆಂಡ್ ಕರ್ಪ್ಯೂವಿನಿಂದ ರೈತರು, ವ್ಯಾಪಾರಸ್ಥರು, ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ.
ಈ ಸಂದರ್ಭದಲ್ಲಿ ವೀಕೆಂಡ್ ಕರ್ಪ್ಯೂ ಅಪ್ರಸ್ತುತ. ಅದೂ ಅಲ್ಲದೇ ಕುಂದಾಪುರದ ಮಟ್ಟಿಗೆ ಶನಿವಾರ ವಾರದಲ್ಲಿ ಅತ್ಯಂತ ಪ್ರಮುಖವಾದ ದಿನವಾಗಿದೆ. ಕುಂದಾಪುರ ಸಂತೆಗೆ ಬೈಂದೂರು, ಹೆಬ್ರಿ, ಬ್ರಹ್ಮಾವರ ತಾಲೂಕುಗಳಿಂದ ರೈತರು, ಸಾರ್ವಜನಿಕರು ಬರುತ್ತಾರೆ. ನಗರದಲ್ಲಿ ವಾರವಿಡೀ ನಡೆಯುವ ವಹಿವಾಟು ಶನಿವಾರ ಒಂದೇ ದಿನ ನಡೆಯುತ್ತದೆ. ವೀಕೆಂಡ್ ಕರ್ಪ್ಯೂ ನಿಂದ ರೈತರು, ವ್ಯಾಪಾರಸ್ಥರು, ವರ್ತಕರು ಸಾರ್ವಜನಿಕರಿಗೆ ತೊಂದರೆಯಾಗುವುದರಿಂದ ಇದನ್ನು ಕೈಬಿಟ್ಟು, ಕೋವಿಡ್ ನಿಯಂತ್ರಣಕ್ಕೆ ಪರ್ಯಾಯ ಕ್ರಮವನ್ನು ಕೈಗೊಳ್ಳುವುದು ಸೂಕ್ತ ಎಂದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…