ಉಡುಪಿ: ಈ ಹಿಂದಿನ ಆದೇಶದಂತೆ ಶುಕ್ರವಾರ ಇಳಿ ಸಂಜೆ ಏಳು ಗಂಟೆಯಿಂದ ಸೋಮವಾರ ಬೆಳಿಗ್ಗೆ ಐದು ಗಂಟೆ ತನಕ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿ ಮತ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆ ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಸಿ., ನಾಳೆ ಬೆಳಿಗ್ಗೆ 6ರಿಂದ 2 ಗಂಟೆ ತನಕ ಅಗತ್ಯ ವಸ್ತು, ಹಾಲು ಮತ್ತಿತರ ಅಂಗಡಿಗಳು ತೆರೆಯಲಿವೆ. ಆಸ್ಪತ್ರೆ, ಮೆಡಿಕಲ್ ಎಂದಿನಂತೆ ಓಪನ್ ಇರಲಿವೆ. ಪೂರ್ವ ನಿಗದಿತ ಮದುವೆಗಳಿಗೆ 40 ಜನರಿಗೆ ಮಾತ್ರ ಅವಕಾಶವಿದೆ. ಅಂತ್ಯಸಂಸ್ಕಾರದಲ್ಲಿ ಐವರು ಭಾಗವಹಿಸಬಹುದು. ಉಳಿದಂತೆ ಹೋಟೆಲ್ ಗಳಲ್ಲಿ ಪಾರ್ಸೆಲ್ ಕೊಡಬಹುದು, ಹೋಮ್ ಡೆಲಿವರಿಗೂ ಅವಕಾಶವಿದೆ. ದೂರದೂರುಗಳಿಂದ ಟ್ರೈನ್, ಬಸ್ ಗಳಲ್ಲಿ ಬರುವವರಿಗೆ ಮನೆಗಳಿಗೆ ಹೋಗಲು ಅವಕಾಶವಿದೆ. ಆದರೆ, ಈ ಹಿಂದಿನ ಆದೇಶದಂತೆ ಫ್ಯಾಕ್ಟರಿ, ಕಾರ್ಖಾನೆಗಳು ಎರಡು ದಿನ ಮುಚ್ಚಲಿವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…