ಉಡುಪಿ: ಈ ಹಿಂದಿನ ಆದೇಶದಂತೆ ಶುಕ್ರವಾರ ಇಳಿ ಸಂಜೆ ಏಳು ಗಂಟೆಯಿಂದ ಸೋಮವಾರ ಬೆಳಿಗ್ಗೆ ಐದು ಗಂಟೆ ತನಕ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿ ಮತ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆ ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಸಿ., ನಾಳೆ ಬೆಳಿಗ್ಗೆ 6ರಿಂದ 2 ಗಂಟೆ ತನಕ ಅಗತ್ಯ ವಸ್ತು, ಹಾಲು ಮತ್ತಿತರ ಅಂಗಡಿಗಳು ತೆರೆಯಲಿವೆ. ಆಸ್ಪತ್ರೆ, ಮೆಡಿಕಲ್ ಎಂದಿನಂತೆ ಓಪನ್ ಇರಲಿವೆ. ಪೂರ್ವ ನಿಗದಿತ ಮದುವೆಗಳಿಗೆ 40 ಜನರಿಗೆ ಮಾತ್ರ ಅವಕಾಶವಿದೆ. ಅಂತ್ಯಸಂಸ್ಕಾರದಲ್ಲಿ ಐವರು ಭಾಗವಹಿಸಬಹುದು. ಉಳಿದಂತೆ ಹೋಟೆಲ್ ಗಳಲ್ಲಿ ಪಾರ್ಸೆಲ್ ಕೊಡಬಹುದು, ಹೋಮ್ ಡೆಲಿವರಿಗೂ ಅವಕಾಶವಿದೆ. ದೂರದೂರುಗಳಿಂದ ಟ್ರೈನ್, ಬಸ್ ಗಳಲ್ಲಿ ಬರುವವರಿಗೆ ಮನೆಗಳಿಗೆ ಹೋಗಲು ಅವಕಾಶವಿದೆ. ಆದರೆ, ಈ ಹಿಂದಿನ ಆದೇಶದಂತೆ ಫ್ಯಾಕ್ಟರಿ, ಕಾರ್ಖಾನೆಗಳು ಎರಡು ದಿನ ಮುಚ್ಚಲಿವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…