ಉಡುಪಿ: ಜಿಲ್ಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನವ ಸಂಕಲ್ಪ ಶಿಬಿರ ನಡೆದಿದ್ದು, ಶಿಬಿರವನ್ನು ಉದ್ಘಾಟಿಸಿ ಭಾಷಣ ಮಾಡುತ್ತಿದ್ದ ವೀರಪ್ಪ ಮೊಯ್ಲಿಗೆ ಕಾಂಗ್ರೆಸ್ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಳೆ ಕಥೆ ಸಾಕು ಮುಂದೇನು ಮಾಡಬೇಕು ಹೇಳಿ ಎಂದ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಪಕ್ಷ ಸಂಘಟಿಸಲು ಹೊಸತೇನಾದರೂ ಹೇಳಿ. ಕುಂದಾಪುರ ಭಾಗದ ಕಾಂಗ್ರೆಸ್ ಕಾರ್ಯಕರ್ತರು ವೀರಪ್ಪ ಮೊಯ್ಲಿಯವರನ್ನು ತರಾಟೆಗೆತ್ತಿಕೊಂಡಿದ್ದಾರೆ. ನಿಮ್ಮ ಬಳಿ ಏನಾದರೂ ಹೊಸತಿದ್ದರೆ ನೀವೇ ಹೇಳಿ ಎಂದು ಮೊಯ್ಲಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ನಿಮ್ಮ ಸಮಸ್ಯೆ ಏನು ಹೇಳಿ ? ನನ್ನ ಮಾತು ಬೇಡವಾದರೆ ನಿಲ್ಲಿಸುತ್ತೇನೆ. ನನಗೆ ಭಾಷಣ ಮಾಡುವ ಚಟ ಇಲ್ಲ. ಕಾರ್ಯಾಗಾರದಲ್ಲಿ ಈ ವಿಚಾರಗಳನ್ನೆಲ್ಲ ಕಾರ್ಯಕರ್ತರು ತಿಳಿದುಕೊಳ್ಳಬೇಕು. ಕಾರ್ಯಾಗಾರದಲ್ಲಿ ಭಾಗವಹಿಸಲು ಮಾನಸಿಕ ಸಿದ್ಧತೆ ಬೇಕು. ಕೆಲವು ವರ್ಗದವರಿಗೆ ನಾನು ಹೇಳುವ ಮಾತು ಕೇಳಲು ಕಷ್ಟವಾಗುತ್ತೆ. ಕಷ್ಟವಾದರೂ ಕೂಡ ನಾವು ಪಕ್ಷ ಕಟ್ಟಬೇಕು. ಕೇವಲ ಸ್ಲೋಗನ್ ಕೂಗಿದರೆ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂದು ಕಾರ್ಯಕರ್ತರಿಗೆ ಮೋಯ್ಲಿ ತಿರುಗೇಟು ನೀಡಿದ್ದಾರೆ.
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…