ಉಡುಪಿ: ಜಿಲ್ಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನವ ಸಂಕಲ್ಪ ಶಿಬಿರ ನಡೆದಿದ್ದು, ಶಿಬಿರವನ್ನು ಉದ್ಘಾಟಿಸಿ ಭಾಷಣ ಮಾಡುತ್ತಿದ್ದ ವೀರಪ್ಪ ಮೊಯ್ಲಿಗೆ ಕಾಂಗ್ರೆಸ್ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಳೆ ಕಥೆ ಸಾಕು ಮುಂದೇನು ಮಾಡಬೇಕು ಹೇಳಿ ಎಂದ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಪಕ್ಷ ಸಂಘಟಿಸಲು ಹೊಸತೇನಾದರೂ ಹೇಳಿ. ಕುಂದಾಪುರ ಭಾಗದ ಕಾಂಗ್ರೆಸ್ ಕಾರ್ಯಕರ್ತರು ವೀರಪ್ಪ ಮೊಯ್ಲಿಯವರನ್ನು ತರಾಟೆಗೆತ್ತಿಕೊಂಡಿದ್ದಾರೆ. ನಿಮ್ಮ ಬಳಿ ಏನಾದರೂ ಹೊಸತಿದ್ದರೆ ನೀವೇ ಹೇಳಿ ಎಂದು ಮೊಯ್ಲಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ನಿಮ್ಮ ಸಮಸ್ಯೆ ಏನು ಹೇಳಿ ? ನನ್ನ ಮಾತು ಬೇಡವಾದರೆ ನಿಲ್ಲಿಸುತ್ತೇನೆ. ನನಗೆ ಭಾಷಣ ಮಾಡುವ ಚಟ ಇಲ್ಲ. ಕಾರ್ಯಾಗಾರದಲ್ಲಿ ಈ ವಿಚಾರಗಳನ್ನೆಲ್ಲ ಕಾರ್ಯಕರ್ತರು ತಿಳಿದುಕೊಳ್ಳಬೇಕು. ಕಾರ್ಯಾಗಾರದಲ್ಲಿ ಭಾಗವಹಿಸಲು ಮಾನಸಿಕ ಸಿದ್ಧತೆ ಬೇಕು. ಕೆಲವು ವರ್ಗದವರಿಗೆ ನಾನು ಹೇಳುವ ಮಾತು ಕೇಳಲು ಕಷ್ಟವಾಗುತ್ತೆ. ಕಷ್ಟವಾದರೂ ಕೂಡ ನಾವು ಪಕ್ಷ ಕಟ್ಟಬೇಕು. ಕೇವಲ ಸ್ಲೋಗನ್ ಕೂಗಿದರೆ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂದು ಕಾರ್ಯಕರ್ತರಿಗೆ ಮೋಯ್ಲಿ ತಿರುಗೇಟು ನೀಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…