ಉಡುಪಿ : ವೀಸಾ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 6.90 ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ವಂಚನೆಗೆ ಒಳಗಾದ ಜಯರಾಜ್ ಆಚಾರ್ಯ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಇವರು ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್ ಅಪ್ ನಲ್ಲಿ ಕಂಡು ಬಂದ ವೀಸಾ ಮಾಡಿಕೊಡುವ ಪ್ರಕಟಣೆಯನ್ನು ಓದಿ ಅದರಲ್ಲಿದ್ದ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಪಾಸ್ಪೋರ್ಟ್ ಮತ್ತು ವೀಸಾ ಮಾಡಿಕೊಡುವ ಏಜೆಂಟ್ ಎಂದು ನಂಬಿಸಿ, ಆನ್ ಲೈನ್ ಮುಖೇನ ಇಂಟರ್ ವೀವ್ ನಡೆಸಿದ್ದನು.
ಬಳಿಕ ವಿಸಾ ಮಾಡಿಸಲು ಚಾರ್ಜ್ ಮತ್ತು ಇನ್ನಿತರ ಖರ್ಚುಗಳ ನೆಪ ಹೇಳಿ ಜ.9 ರಿಂದ ಫೆ.8 ರವರೆಗೆ ಹಂತ ಹಂತವಾಗಿ ಒಟ್ಟು 6,90,343 ರೂ. ಹಣವನ್ನು ವಿವಿಧ ಖಾತೆಗೆ ಆನ್ಲೈನ್ ಮುಖೇನ ವರ್ಗಾವಣೆ ಮಾಡಿಸಿಕೊಂಡು, ವೀಸಾ ನೀಡದೇ ಪಡೆದ ಹಣವನ್ನೂ ವಾಪಾಸು ನೀಡದೇ ವಂಚಿಸಿರುವುದಾಗಿ ನೀಡಿದ ವಂಚಿಸಿರುವುದಾಗಿ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…