ಉಡುಪಿ : ವೀಸಾ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 6.90 ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ವಂಚನೆಗೆ ಒಳಗಾದ ಜಯರಾಜ್ ಆಚಾರ್ಯ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಇವರು ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್ ಅಪ್ ನಲ್ಲಿ ಕಂಡು ಬಂದ ವೀಸಾ ಮಾಡಿಕೊಡುವ ಪ್ರಕಟಣೆಯನ್ನು ಓದಿ ಅದರಲ್ಲಿದ್ದ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಪಾಸ್ಪೋರ್ಟ್ ಮತ್ತು ವೀಸಾ ಮಾಡಿಕೊಡುವ ಏಜೆಂಟ್ ಎಂದು ನಂಬಿಸಿ, ಆನ್ ಲೈನ್ ಮುಖೇನ ಇಂಟರ್ ವೀವ್ ನಡೆಸಿದ್ದನು.
ಬಳಿಕ ವಿಸಾ ಮಾಡಿಸಲು ಚಾರ್ಜ್ ಮತ್ತು ಇನ್ನಿತರ ಖರ್ಚುಗಳ ನೆಪ ಹೇಳಿ ಜ.9 ರಿಂದ ಫೆ.8 ರವರೆಗೆ ಹಂತ ಹಂತವಾಗಿ ಒಟ್ಟು 6,90,343 ರೂ. ಹಣವನ್ನು ವಿವಿಧ ಖಾತೆಗೆ ಆನ್ಲೈನ್ ಮುಖೇನ ವರ್ಗಾವಣೆ ಮಾಡಿಸಿಕೊಂಡು, ವೀಸಾ ನೀಡದೇ ಪಡೆದ ಹಣವನ್ನೂ ವಾಪಾಸು ನೀಡದೇ ವಂಚಿಸಿರುವುದಾಗಿ ನೀಡಿದ ವಂಚಿಸಿರುವುದಾಗಿ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…