ಉಡುಪಿ : ವೀಸಾ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 6.90 ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ವಂಚನೆಗೆ ಒಳಗಾದ ಜಯರಾಜ್ ಆಚಾರ್ಯ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಇವರು ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್ ಅಪ್ ನಲ್ಲಿ ಕಂಡು ಬಂದ ವೀಸಾ ಮಾಡಿಕೊಡುವ ಪ್ರಕಟಣೆಯನ್ನು ಓದಿ ಅದರಲ್ಲಿದ್ದ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಪಾಸ್ಪೋರ್ಟ್ ಮತ್ತು ವೀಸಾ ಮಾಡಿಕೊಡುವ ಏಜೆಂಟ್ ಎಂದು ನಂಬಿಸಿ, ಆನ್ ಲೈನ್ ಮುಖೇನ ಇಂಟರ್ ವೀವ್ ನಡೆಸಿದ್ದನು.
ಬಳಿಕ ವಿಸಾ ಮಾಡಿಸಲು ಚಾರ್ಜ್ ಮತ್ತು ಇನ್ನಿತರ ಖರ್ಚುಗಳ ನೆಪ ಹೇಳಿ ಜ.9 ರಿಂದ ಫೆ.8 ರವರೆಗೆ ಹಂತ ಹಂತವಾಗಿ ಒಟ್ಟು 6,90,343 ರೂ. ಹಣವನ್ನು ವಿವಿಧ ಖಾತೆಗೆ ಆನ್ಲೈನ್ ಮುಖೇನ ವರ್ಗಾವಣೆ ಮಾಡಿಸಿಕೊಂಡು, ವೀಸಾ ನೀಡದೇ ಪಡೆದ ಹಣವನ್ನೂ ವಾಪಾಸು ನೀಡದೇ ವಂಚಿಸಿರುವುದಾಗಿ ನೀಡಿದ ವಂಚಿಸಿರುವುದಾಗಿ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…