ಉಡುಪಿ : ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನ. 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಅವರು ಮನೆಯ ಹಾಲ್ನ ಗಾಜಿನ ರ್ಯಾಕ್ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾರೆ. ಜೊತೆಗೆ ಮಲಗುವ ಕೋಣೆಯಲ್ಲಿದ್ದ ರಹಸ್ಯ ಲಾಕರ್ನಿಂದ 31,17,100 ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…