Featured

ಉಡುಪಿ: ಹೋಮ್ ನರ್ಸ್ ನಿಂದ  ಮನೆಯಲ್ಲಿದ್ದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವು – vishwanews24

ಉಡುಪಿ: ವೃದ್ಧೆಯ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ನಿಂದ  31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವು

ಉಡುಪಿ : ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.

ನ. 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಅವರು ಮನೆಯ ಹಾಲ್‌ನ ಗಾಜಿನ ರ‍್ಯಾಕ್‌ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾರೆ. ಜೊತೆಗೆ ಮಲಗುವ ಕೋಣೆಯಲ್ಲಿದ್ದ ರಹಸ್ಯ ಲಾಕರ್‌ನಿಂದ 31,17,100 ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.

ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

24 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

55 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago