ಉಡುಪಿ : ಪ್ರತಿವರ್ಷದಂತೆ ಈ ಬಾರಿಯೂ ಸಮಾಜಸೇವಕ ರವಿ ಕಟಪಾಡಿ ಅವರು ಅನಾರೋಗ್ಯಪೀಡಿತ ಬಡ ಮಕ್ಕಳಿಗಾಗಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವಿಭಿನ್ನ ವೇಷ ಧರಿಸಿ 7,17,350 ರು.ಗಳನ್ನು ಸಂಗ್ರಹಿಸಿದ್ದು, ಅದನ್ನು ಗುರುವಾರ 8 ಮಂದಿ ಮಕ್ಕಳಿಗೆ ಹಸ್ತಾಂತರಿಸಲಿದ್ದಾರೆ.
ಈವರೆಗೆ 6 ವರ್ಷಗಳಲ್ಲಿ ರವಿ ಅವರು ಹಾಲಿವುಡ್ ಸಿನೆಮಾಗಳಲ್ಲಿ ಬರುವ ಫ್ಯಾಂಟಸಿ ಪಾತ್ರಗಳ ವೇಷ ಧರಿಸಿ ಸುಮಾರು 72 ಲಕ್ಷ ರು.ಗೂ ಅಧಿಕ ಮೊತ್ತ ಸಂಗ್ರಹಿಸಿದ್ದು, 33 ಬಡ ಕುಟುಂಬಗಳ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ದಾನ ಮಾಡಿದ್ದಾರೆ. ಈ ಬಾರಿ 8 ಮಕ್ಕಳೂ ಸೇರಿ ಒಟ್ಟು 41 ಮಕ್ಕಳಿಗೆ ಅವರು ಸುಮಾರು 79 ಲಕ್ಷ ರು. ವಿತರಿಸಿದಂತಾಗಿದೆ. ಮುಂದೆಯೂ ಇದೇ ರೀತಿ ವೇಷ ಧರಿಸಿ ಒಟ್ಟು 1 ಕೋಟಿ ರು.ಗಳಷ್ಟು ಸಹಾಯ ಮಾಡುವ ಗುರಿ ಹಾಕಿಕೊಂಡಿದ್ದಾರೆ. ಕೊರೋನಾ ಕಾರಣದಿಂದ 3- 4 ಲಕ್ಷ ಸಂಗ್ರಹವಾಗಬಹುದು ಎಂಬ ನಿರೀಕ್ಷೆ ಇತ್ತು ಎಂದು ರವಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಗುರುವಾರ ಸಂಜೆ ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ಉಡುಪಿ ಡಿಸಿ ಕೂರ್ಮಾ ರಾವ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರು ರಕ್ತದ ಕ್ಯಾನ್ಸರ್, ಯಕೃತ್ತು, ಕಿಡ್ನಿ ಕಾಯಿಲೆ, ಅಪಘಾತ ಚಿಕಿತ್ಸೆ ಇತ್ಯಾದಿಗಳಿಗೆ ಲಕ್ಷಾಂತರ ರು. ಅಗತ್ಯ ಇರುವ ಉಡುಪಿ, ಬ್ರಹ್ಮಾವರ, ಮಂಗಳೂರು, ಹಳೆಯಂಗಡಿ ಮುಂತಾದ ಕಡೆಯ ಮಕ್ಕಳಿಗೆ ಹಣ ಹಸ್ತಾಂತರಿಸಲಿದ್ದಾರೆ ಎಂದವರು ಹೇಳಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]