Featured

ಉಡುಪಿ: ವೇಷ ಧರಿಸಿ 7 ಲಕ್ಷ ರು.ಗಳನ್ನು 8 ಮಕ್ಕಳಿಗೆ ದಾನ ಮಾಡಿದ ರವಿ ಕಟಪಾಡಿ..-Vishwanews24

ಉಡುಪಿ: ವೇಷ ಧರಿಸಿ 7 ಲಕ್ಷ ರು.ಗಳನ್ನು 8 ಮಕ್ಕಳಿಗೆ ದಾನ ಮಾಡಿದ ರವಿ ಕಟಪಾಡಿ..-Vishwanews24

ಉಡುಪಿ : ಪ್ರತಿವರ್ಷದಂತೆ ಈ ಬಾರಿಯೂ ಸಮಾಜಸೇವಕ ರವಿ ಕಟಪಾಡಿ ಅವರು ಅನಾರೋಗ್ಯಪೀಡಿತ ಬಡ ಮಕ್ಕಳಿಗಾಗಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವಿಭಿನ್ನ ವೇಷ ಧರಿಸಿ 7,17,350 ರು.ಗಳನ್ನು ಸಂಗ್ರಹಿಸಿದ್ದು, ಅದನ್ನು ಗುರುವಾರ 8 ಮಂದಿ ಮಕ್ಕಳಿಗೆ ಹಸ್ತಾಂತರಿಸಲಿದ್ದಾರೆ.

ಈವರೆಗೆ 6 ವರ್ಷಗಳಲ್ಲಿ ರವಿ ಅವರು ಹಾಲಿವುಡ್‌ ಸಿನೆಮಾಗಳಲ್ಲಿ ಬರುವ ಫ್ಯಾಂಟಸಿ ಪಾತ್ರಗಳ ವೇಷ ಧರಿಸಿ ಸುಮಾರು 72 ಲಕ್ಷ ರು.ಗೂ ಅಧಿಕ ಮೊತ್ತ ಸಂಗ್ರಹಿಸಿದ್ದು, 33 ಬಡ ಕುಟುಂಬಗಳ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ದಾನ ಮಾಡಿದ್ದಾರೆ. ಈ ಬಾರಿ 8 ಮಕ್ಕಳೂ ಸೇರಿ ಒಟ್ಟು 41 ಮಕ್ಕಳಿಗೆ ಅವರು ಸುಮಾರು 79 ಲಕ್ಷ ರು. ವಿತರಿಸಿದಂತಾಗಿದೆ. ಮುಂದೆಯೂ ಇದೇ ರೀತಿ ವೇಷ ಧರಿಸಿ ಒಟ್ಟು 1 ಕೋಟಿ ರು.ಗಳಷ್ಟು ಸಹಾಯ ಮಾಡುವ ಗುರಿ ಹಾಕಿಕೊಂಡಿದ್ದಾರೆ. ಕೊರೋನಾ ಕಾರಣದಿಂದ 3- 4 ಲಕ್ಷ ಸಂಗ್ರಹವಾಗಬಹುದು ಎಂಬ ನಿರೀಕ್ಷೆ ಇತ್ತು ಎಂದು ರವಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಗುರುವಾರ ಸಂಜೆ ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ಉಡುಪಿ ಡಿಸಿ ಕೂರ್ಮಾ ರಾವ್‌, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್‌ ಅವರು ರಕ್ತದ ಕ್ಯಾನ್ಸರ್‌, ಯಕೃತ್ತು, ಕಿಡ್ನಿ ಕಾಯಿಲೆ, ಅಪಘಾತ ಚಿಕಿತ್ಸೆ ಇತ್ಯಾದಿಗಳಿಗೆ ಲಕ್ಷಾಂತರ ರು. ಅಗತ್ಯ ಇರುವ ಉಡುಪಿ, ಬ್ರಹ್ಮಾವರ, ಮಂಗಳೂರು, ಹಳೆಯಂಗಡಿ ಮುಂತಾದ ಕಡೆಯ ಮಕ್ಕಳಿಗೆ ಹಣ ಹಸ್ತಾಂತರಿಸಲಿದ್ದಾರೆ ಎಂದವರು ಹೇಳಿದ್ದಾರೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

3 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

6 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

6 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

7 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

7 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

7 hours ago